ಆ್ಯಪ್ನಗರ

ಕರ್ನಾಟಕದಲ್ಲಿ 11,000 ಕೋಟಿ ರೂ. ಮೊತ್ತದ ಹೆದ್ದಾರಿ ಯೋಜನೆಗೆ ಚಾಲನೆ ನೀಡಿದ ನಿತಿನ್‌ ಗಡ್ಕರಿ

8 ಪೂರ್ಣಗೊಂಡ ಹೆದ್ದಾರಿಗಳನ್ನು ನಿತಿನ್‌ ಗಡ್ಕರಿ ಉದ್ಘಾಟಿಸಿದರೆ, 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಹೆದ್ದಾರಿಗಳ ಒಟ್ಟು ಉದ್ದ 1,200 ಕಿಲೋ ಮೀಟರ್‌ಗಳಾಗಿವೆ.

Vijaya Karnataka 19 Dec 2020, 1:14 pm
ಹೊಸದಿಲ್ಲಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಶನಿವಾರ ಕರ್ನಾಟಕದಲ್ಲಿ 11,000 ಕೋಟಿ ರೂಪಾಯಿ ಮೊತ್ತದ ಹೆದ್ದಾರಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
Vijaya Karnataka Web Nitin Gadkari inaugurates highway projects in Karnataka


ಇದರಲ್ಲಿ ಒಟ್ಟು 33 ಯೋಜನೆಗಳು ಸೇರಿದ್ದು, 1,200 ಕಿಲೋ ಮೀಟರ್‌ ಉದ್ದದ ಹೆದ್ದಾರಿಗಳನ್ನು ಇವು ಒಳಗೊಂಡಿದೆ. 8 ಪೂರ್ಣಗೊಂಡ ಹೆದ್ದಾರಿಗಳನ್ನು ಗಡ್ಕರಿ ಉದ್ಘಾಟಿಸಿದರೆ, 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ರಸ್ತೆ ಸಾರಿಗೆ, ಹೆದ್ದಾರಿ ಮತ್ತು ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಸಚಿವ ನಿತಿನ್‌ ಗಡ್ಕರಿ ಶನಿವಾರ ಕರ್ನಾಟಕದಲ್ಲಿ 33 ಹೆದ್ದಾರಿ ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಶುಕ್ರವಾರವೇ ಪ್ರಕಟಣೆ ಹೊರಡಿಸಿತ್ತು.

ವರ್ಚುವಲ್‌ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ ಜೋಶಿ, ಜನರಲ್ ಡಾ. ವಿ.ಕೆ. ಸಿಂಗ್, ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಭಾಗಿಯಾದರು.

ಈ ಹೆದ್ದಾರಿ ಯೋಜನೆಗಳಿಂದ ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಅನುಕೂಲವಾಗಲಿದೆ. ಈ ರಸ್ತೆಗಳು ಹೆಚ್ಚಿನ ಸಂಪರ್ಕ ಸಾಧಿಸಲು ಸಹಾಯ ಮಾಡಲಿದ್ದು, ರಾಜ್ಯದ ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ