ಆ್ಯಪ್ನಗರ

ನಾನು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿಲ್ಲ! ಹೀಗೆಂದು ಸಿದ್ದರಾಮಯ್ಯ ಹೇಳಿದ್ದು ಏಕೆ?

ನಾನು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಅವರು ಹೇಳಿದ್ದಿಷ್ಟು.

Vijaya Karnataka Web 19 Mar 2020, 4:05 pm
ಬೆಂಗಳೂರು: ಕೊರೊನಾ ಸೋಂಕು ಹರಡದಂತೆ ಮುಂಜಾಗರೂಕತಾ ಕ್ರಮವಾಗಿ ವಿಧಾನಸೌಧದಲ್ಲಿ ಥರ್ಮಲ್‌ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಸ್ವತಃ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಥರ್ಮಲ್ ಸ್ಕ್ರೀನಿಂಗ್‌ ಮೂಲಕ ದೇಹದ ಉಷ್ಣಾಂಶ ಪರೀಕ್ಷೆ ಮಾಡಿಕೊಂಡಿದ್ದರು. ಆದರೆ ಕೆಲವು ಪತ್ರಿಕೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡ ಸಿದ್ದರಾಮಯ್ಯ ಎಂದು ವರದಿಯಾಗಿತ್ತು. ಇದಕ್ಕೆ ಟ್ವಿಟ್ಟರ್‌ನಲ್ಲಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ನಾನು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿಲ್ಲ ಎಂದಿದ್ದಾರೆ.
Vijaya Karnataka Web corona screening



ಕೊರೊನಾ ಭೀತಿಯಲ್ಲಿ ಡೇ - 6 : ಹೇಗಿದೆ ಬೆಂಗಳೂರು?

ದೇಹದ ಉಷ್ಣಾಂಶದ ಕುರಿತಾಗಿ ತಿಳಿದುಕೊಳ್ಳಲು ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆಸಲಾಗುತ್ತದೆ. ಹಣೆಯ ಭಾಗಕ್ಕೆ ಸ್ಕ್ರೀನಿಂಗ್ ಯಂತ್ರದಿಂದ ಪರೀಕ್ಷೆ ಮಾಡಿದರೆ ದೇಹದ ಉಷ್ಣಾಂಶ ಎಷ್ಟಿದೆ ಎಂಬುವುದು ಗೊತ್ತಾಗುತ್ತದೆ. ಯಂತ್ರದಲ್ಲಿ ಪರೀಕ್ಷೆ ಮಾಡಿದ ಸಂದರ್ಭದಲ್ಲಿ ಉಷ್ಣಾಂಶ ಹೆಚ್ಚಾಗಿರುವುದು ಕಂಡುಬಂದು ಜೊತೆಗೆ ಶೀತ, ಕೆಮ್ಮು ಇದ್ದವರು ಕೂಡಲೇ ವೈದ್ಯರ ಬಳಿ ತಪಾಸಣೆ ಮಾಡಿಕೊಳ್ಳಬೇಕು.

ಈ ವಿಚಾರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ "ಕೆಲವು ಪತ್ರಿಕೆಗಳ ವರದಿಯಂತೆ ನಾನು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿಲ್ಲ.ಅದು ದೇಹದ ಉಷ್ಣಾಂಶ ಪರೀಕ್ಷೆ ಅಷ್ಟೆ.ಜ್ವರ,ಶೀತ,ಕೆಮ್ಮು ಇದ್ದವರು ತಕ್ಷಣ ವೈದ್ಯರ ಬಳಿ ಹೋಗಿ.ಅನುಮಾನ ಬಂದರೆ ಆರೋಗ್ಯ ಇಲಾಖೆ ಸಂಪರ್ಕಿಸಿ ಸರಿಯಾದ ಕ್ರಮದಲ್ಲಿ ಕೊರೊನಾ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಿ” ಎಂದಿದ್ದಾರೆ.

ಕೊರೊನಾ ವೈರಸ್ ಲೈವ್ ಅಪ್ಡೇಟ್ಸ್: ರಾಜ್ಯದಲ್ಲಿ 15ಕ್ಕೆ ಏರಿಕೆಯಾದ ಸೋಂಕಿತ ಪ್ರಕರಣ!

ರಾಜ್ಯದಲ್ಲಿ ಇದುವರೆಗೂ 15 ಕೋವಿಡ್‌-19 ಪ್ರಕರಣಗಳು ವರದಿಯಾಗಿದೆ. ಕೆಲವು ಶಂಕಿತರನ್ನು ನಿಗಾದಲ್ಲಿ ಇಡಲಾಗಿದ್ದು ಸರ್ಕಾರ ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿಮಾನ ನಿಲ್ದಾಣದಲ್ಲಿ ತಪಾಸಣೆಯನ್ನು ಕಟ್ಟುನಿಟ್ಟುಗೊಳಿಸಿದ್ದು ವಿದೇಶದಿಂದ ಆಗಮಿಸಿದ ಪ್ರಯಾಣಿಕರ ಕೈಗೆ ಮುದ್ರೆ ಹಾಕುವ ಮೂಲಕ ನಿಗಾ ಇಡಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ