ಆ್ಯಪ್ನಗರ

ಬಜೆಟ್‌ ವಿಚಾರದಲ್ಲಿ ಭಿನ್ನಾಭಿಪ್ರಾಯವಿಲ್ಲ: ಪರಮೇಶ್ವರ್‌

ಬಜೆಟ್‌ ವಿಚಾರದಲ್ಲಿ ನಮ್ಮಲ್ಲಿ ಭಿನ್ನಾಭಿಪ್ರಾಯ ಇದೆ ಅನ್ನುವುದು ನಿಮ್ಮ ಕಲ್ಪನೆ ಎಂದು ಡಿಸಿಎಂ ಪರಮೇಶ್ವರ್‌ ಹೇಳಿದ್ದಾರೆ.

Vijaya Karnataka Web 25 Jun 2018, 2:18 pm
ಬೆಂಗಳೂರು: ಬಜೆಟ್ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇದೆಯೇ, ಸಿಎಂಗೆ ಇದೆಯೇ ಅಥವಾ ನನಗೆ ಇದೆಯೇ ಎಂಬ ಬಗ್ಗೆ ನಾವೇ ಚರ್ಚೆ ಮಾಡುತ್ತೇವೆ. ನಾನು ಬಜೆಟ್ ಬೇಕು ಅಂದಿರುವುದು, ಅವರು ಬೇಡ ಅಂದಿರುವುದು, ಈ ವಿಚಾರದಲ್ಲಿ ನಮ್ಮಲ್ಲಿ ಭಿನ್ನಾಭಿಪ್ರಾಯ ಇದೆ ಅನ್ನುವುದು ನಿಮ್ಮ ಕಲ್ಪನೆ ಎಂದು ಡಿಸಿಎಂ ಪರಮೇಶ್ವರ್‌ ಹೇಳಿದ್ದಾರೆ.
Vijaya Karnataka Web param


ಬಜೆಟ್ ಮಂಡನೆ ಸಮರ್ಥನೆ ವಿಚಾರದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ ಇರುತ್ತದೆ. ಎಲ್ಲರದ್ದು ಒಂದೇ ಆಗಿರುವುದಿಲ್ಲ ಎಂದ ಪರಮೇಶ್ವರ್‌, ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಹೋಗಿದ್ದೆ ಎಂದು ಹೇಳಿದರು.

ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕದ ಬಗ್ಗೆ ಚರ್ಚೆ ಮಾಡಿದ್ದೇವೆ.ಕೆಲವು ದಿನಗಳ ಬಳಿಕ ಸಿದ್ದರಾಮಯ್ಯ ಬರುತ್ತಾರೆ. ಆಗ ಸಮನ್ವಯ ಸಮಿತಿಯ ಸಭೆ ಕರೆಯುತ್ತಾರೆ. ಅಲ್ಲಿ ಚರ್ಚೆ ಮಾಡುತ್ತೇವೆ. ಸಂಪುಟ ವಿಸ್ತರಣೆ ಯಾವಾಗಲಾದರೂ ಆಗಬಹುದು ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ