ಆ್ಯಪ್ನಗರ

ಕುಡುಕರಿಗೂ, ಸಿದ್ದರಾಮಯ್ಯರಿಗೂ ವ್ಯತ್ಯಾಸ ಇಲ್ಲ

ಪಕ್ಷದ ಶಾಸಕರನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಆಗಲ್ಲ ಎಂದ ಮೇಲೆ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಕೆ.ಎಸ್‌.ಈಶ್ವರಪ್ಪ ಕುಟುಕಿದ್ದಾರೆ.

Vijaya Karnataka 22 Jan 2019, 5:00 am
ಶಿವಮೊಗ್ಗ : ಪಕ್ಷದ ಶಾಸಕರನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಆಗಲ್ಲ ಎಂದ ಮೇಲೆ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಕೆ.ಎಸ್‌.ಈಶ್ವರಪ್ಪ ಕುಟುಕಿದ್ದಾರೆ.
Vijaya Karnataka Web no diffrence between siddaramaiah and drunkards
ಕುಡುಕರಿಗೂ, ಸಿದ್ದರಾಮಯ್ಯರಿಗೂ ವ್ಯತ್ಯಾಸ ಇಲ್ಲ


ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು,''ರಾಜ್ಯ ಸರಕಾರ ಕಲಾಸಿಪಾಳ್ಯ ಸರಕಾರವಾಗಿದೆ. ಕುಡಿದು ಅವರ ಶಾಸಕರೇ ಹೊಡೆದಾಡಿಕೊಳ್ಳುತ್ತಿದ್ದಾರೆ. ಇತ್ತ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೂ ಕುಡುಕರಿಗೂ ಏನೂ ವ್ಯತ್ಯಾಸ ಇಲ್ಲ,''ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯ ಮತ್ತೊಂದು ಮದ್ವೆ ಆಗ್ತಿದ್ದಾರೆ !

''ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಮಾತನಾಡುವಾಗ ಸಿದ್ದರಾಮಯ್ಯ ಅವರು ಎಚ್ಚರಿಕೆಯಿಂದ ಮಾತನಾಡಬೇಕು. ವಯಸ್ಸಾದರೂ ಬುದ್ಧಿಬಂದಿಲ್ಲ , ರೆಸಾರ್ಟ್‌ ಸಂಸ್ಕೃತಿ, ಸುಳ್ಳಿನ ಸರಕಾರ ಎಂದೆಲ್ಲ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಯಡಿಯೂರಪ್ಪರಿಗೆ ವಯಸ್ಸಾಗಿದೆ. ಆದರೆ, ಸಿದ್ದರಾಮಯ್ಯರಿಗೆ ಇನ್ನೂ ವಯಸ್ಸಾಗಿಲ್ಲ. ಅವರ ಮಕ್ಕಳು ಅವರಿಗೆ ಇನ್ನೊಂದು ಮದ್ವೆ ಮಾಡಲು ಹೆಣ್ಣು ಹುಡುಕುತ್ತಿದ್ದಾರೆ,'' ಎಂದು ವ್ಯಂಗ್ಯವಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ