ಆ್ಯಪ್ನಗರ

ವಿಧಾನಮಂಡಲ ಕಲಾಪಕ್ಕೆ ಮಾಧ್ಯಮ ಕ್ಯಾಮರಾಗಳಿಗಿಲ್ಲ ಅವಕಾಶ, ಬದಲಾಗದ ಸ್ಪೀಕರ್‌ ನಿಲುವು

ವಿಧಾನಮಂಡಲ ಅಧಿವೇಶನದ ಚಿತ್ರೀಕರಣಕ್ಕೆ ಮಾಧ್ಯಮಗಳ ಕ್ಯಾಮರಾಗಳಿಗೆ ರಾಜ್ಯ ಸರಕಾರ ಹೇರಿರುವ ನಿರ್ಬಂಧ ಮುಂದುವರಿಯಲಿದೆ. ಈ ವಿಚಾರವಾಗಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

Vijaya Karnataka 14 Feb 2020, 4:27 pm
ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಮಾಧ್ಯಮ ಕ್ಯಾಮರಾಗಳಿಗೆ ಹೇರಿದ ನಿರ್ಬಂಧ ಆದೇಶದಲ್ಲಿ ಯಾವುದೇ ಬದಲಾವಣೆಯನ್ನು ಮಾಡದಿರಲು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ಧರಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶದಲ್ಲೂ ಮಾಧ್ಯಮಗಳ ಕ್ಯಾಮರಾಗಳಿಗೆ ಅವಕಾಶವಿಲ್ಲ ಎಂದರು.
Vijaya Karnataka Web no media camera allowed for karnataka assembly session
ವಿಧಾನಮಂಡಲ ಕಲಾಪಕ್ಕೆ ಮಾಧ್ಯಮ ಕ್ಯಾಮರಾಗಳಿಗಿಲ್ಲ ಅವಕಾಶ, ಬದಲಾಗದ ಸ್ಪೀಕರ್‌ ನಿಲುವು


ಫೆಬ್ರವರಿ 17 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು ಜಂಟಿ ಅಧಿವೇಶನವನ್ನು ಉದ್ದೇಶಿಸಿ 11 ಗಂಟೆಗೆ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

ಕಳೆದ ಬಾರಿಯಂತೆ ಈ ಬಾರಿಯೂ ಖಾಸಗಿ ಮಾಧ್ಯಮಗಳಿಗೆ ಅಧಿವೇಶನ ಕಲಾಪಗಳ ಚಿತ್ರೀಕರಣಕ್ಕೆ ಅವಕಾಶವಿಲ್ಲ. ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯನ್ನೇ ಎಲ್ಲಾ ವಿಧಾನಸಭೆಗಳು ಅನುಸರಿಸುತ್ತಿವೆ. ರಾಜ್ಯದಲ್ಲೂ ಇದೇ ಮಾದರಿಯನ್ನು ಅನುಸರಿಸಲು ಸರಕಾರ ನಿರ್ಧರಿಸಿದೆ.

ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ -ಸರಕಾರದ ನಡೆ ಖಂಡಿಸಿ ಪತ್ರಕರ್ತರ ಪ್ರತಿಭಟನೆ

ಮಾಧ್ಯಮಗಳಿಗೆ ಕಲಾಪದಲ್ಲಿ ಚಿತ್ರೀಕರಣಕ್ಕೆ ಅವಕಾಶ ನಿರಾಕರಿಸಿದ ಸರ್ಕಾರದ ನಡೆಗೆ ವಿರೋಧ ವ್ಯಕ್ತವಾಗಿದೆ. ಮಾಜಿ ಸಚಿವ ಎಚ್‌. ಡಿ ರೇವಣ್ಣ ಕೂಡಾ ಸರ್ಕಾರದ ನಡೆಯನ್ನು ವಿರೋಧಿಸಿದ್ದಾರೆ. ಈ ವಿಚಾರವಾಗಿ ಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

ಕಳೆದ ಬಾರಿಯ ಅಧಿವೇಶನದ ಸಂದರ್ಭದಲ್ಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಈ ನಿರ್ಧಾರವನ್ನು ಕೈಗೊಂಡಿದ್ದರು. ಸ್ಪೀಕರ್‌ ನಿರ್ಧಾರಕ್ಕೆ ಪತ್ರಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಪ್ರತಿಭಟನೆಯನ್ನು ನಡೆಸುವ ಮೂಲಕ ಸರ್ಕಾರದ ನಡೆಯನ್ನು ಖಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ