ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದರೆ ಸಾಕು ಅನಾವೃಷ್ಟಿ ನೀಗಿ ಅತಿವೃಷ್ಟಿ ಬರುತ್ತದೆ ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿದರು.
ವಿಕಾಸಸೌಧದ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಅತಿವೃಷ್ಟಿಯಿಂದ ಒಂದೇ ವಾರದಲ್ಲಿ ಎಲ್ಲ ಜಲಾಶಯಗಳು ತುಂಬಿ ಹರಿಯುತ್ತಿವೆ. ಇದು ಯಡಿಯೂರಪ್ಪ ಅವರಿಂದ ಬಂದ ಅದೃಷ್ಟ ಎಂದವರು ಅಭಿಪ್ರಾಯಪಟ್ಟರು.
ಮಧ್ಯಂತರ ಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ ಸೋಮಣ್ಣ, 'ಸಿದ್ದರಾಮಯ್ಯ ಅವರು ಅನುಭವಿ ರಾಜಕಾರಣಿ. ಅವರ ದೃಷ್ಟಿಕೋನ ಯಾವ ರೀತಿ ಇದೆಯೋ ಗೊತ್ತಿಲ್ಲ. ನನ್ನ ರಾಜಕೀಯ ಅನುಭವದ ಪ್ರಕಾರ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ' ಎಂದಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸರಕಾರ 3 ವರ್ಷ 9 ತಿಂಗಳು ಅಧಿಕಾರ ನಡೆಸುತ್ತೆ. ಸದ್ಯ ರಾಜ್ಯದ ಜನತೆ ಕೂಡ ಚುನಾವಣೆ ಬಯಸುತ್ತಿಲ್ಲ ಎಂದು ಹೇಳಿದರು.
ವಸತಿ ಇಲಾಖೆಯಲ್ಲಿ ಹಿಂದಿನ ಸರಕಾರ ಜಾರಿ ಮಾಡಿರುವ ಯಾವುದೇ ಯೋಜನೆಗಳಿಗೆ ತಡೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಎಲ್ಲ ಯೋಜನೆಗಳನ್ನು ಮುಂದುವರೆಸುತ್ತೇವೆ. ಜನರಿಗೆ ಒಳ್ಳೆಯದಾಗಬೇಕು ಅಷ್ಟೆ ಎಂದರು.
ವಿಕಾಸಸೌಧದ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಅತಿವೃಷ್ಟಿಯಿಂದ ಒಂದೇ ವಾರದಲ್ಲಿ ಎಲ್ಲ ಜಲಾಶಯಗಳು ತುಂಬಿ ಹರಿಯುತ್ತಿವೆ. ಇದು ಯಡಿಯೂರಪ್ಪ ಅವರಿಂದ ಬಂದ ಅದೃಷ್ಟ ಎಂದವರು ಅಭಿಪ್ರಾಯಪಟ್ಟರು.
ಮಧ್ಯಂತರ ಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ ಸೋಮಣ್ಣ, 'ಸಿದ್ದರಾಮಯ್ಯ ಅವರು ಅನುಭವಿ ರಾಜಕಾರಣಿ. ಅವರ ದೃಷ್ಟಿಕೋನ ಯಾವ ರೀತಿ ಇದೆಯೋ ಗೊತ್ತಿಲ್ಲ. ನನ್ನ ರಾಜಕೀಯ ಅನುಭವದ ಪ್ರಕಾರ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ' ಎಂದಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸರಕಾರ 3 ವರ್ಷ 9 ತಿಂಗಳು ಅಧಿಕಾರ ನಡೆಸುತ್ತೆ. ಸದ್ಯ ರಾಜ್ಯದ ಜನತೆ ಕೂಡ ಚುನಾವಣೆ ಬಯಸುತ್ತಿಲ್ಲ ಎಂದು ಹೇಳಿದರು.
ವಸತಿ ಇಲಾಖೆಯಲ್ಲಿ ಹಿಂದಿನ ಸರಕಾರ ಜಾರಿ ಮಾಡಿರುವ ಯಾವುದೇ ಯೋಜನೆಗಳಿಗೆ ತಡೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಎಲ್ಲ ಯೋಜನೆಗಳನ್ನು ಮುಂದುವರೆಸುತ್ತೇವೆ. ಜನರಿಗೆ ಒಳ್ಳೆಯದಾಗಬೇಕು ಅಷ್ಟೆ ಎಂದರು.