ಆ್ಯಪ್ನಗರ

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ: ಕುಮಾರಸ್ವಾಮಿ

ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರು ಮಧ್ಯಂತರ ಚುನಾವಣೆ ಬರಲಿದೆ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಇದು ಅವರ ವೈಯುಕ್ತಿಕವಾಗಿ ಹೇಳಿಕೆಯಾಗಿದೆ. ಇದರ ಬಗ್ಗೆ ನಾನು ಏನು ಹೇಳುವುದಿಲ್ಲ ಎಂದರು.

Vijaya Karnataka Web 21 Jun 2019, 9:47 am
ಯಾದಗಿರಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲವೆಂದು ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಹೇಳಿದರು.
Vijaya Karnataka Web ಸಿಎಂ ಎಚ್‌ಡಿಕೆಗೆ ಪೊಲೀಸರಿಂದ ಗೌರವ ವಂದನೆ
ಸಿಎಂ ಎಚ್‌ಡಿಕೆಗೆ ಪೊಲೀಸರಿಂದ ಗೌರವ ವಂದನೆ


ಯಾದಗಿರಿಯ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಸರಕಾರ ಸಂಪೂರ್ಣ ಸುಭದ್ರವಾಗಿದೆ ಎಂದು ತಿಳಿಸಿದರು.

ಈ ಸರಕಾರ ಐದು ವರ್ಷಗಳ ಕಾಲ ಆಡಳಿತ ನಡೆಸಲಿದೆ. ನಾನೇ ಅವಧಿಯನ್ನು ಪೂರ್ಣವಾಗಿ ಮುಗಿಸಲಿದ್ದೇನೆ ಎಂದು ಎಚ್‌ಡಿಕೆ ತಿಳಿಸಿದರು.

ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರು ಮಧ್ಯಂತರ ಚುನಾವಣೆ ಬರಲಿದೆ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಇದು ಅವರ ವೈಯುಕ್ತಿಕವಾಗಿ ಹೇಳಿಕೆಯಾಗಿದೆ. ಇದರ ಬಗ್ಗೆ ನಾನು ಏನು ಹೇಳುವುದಿಲ್ಲ ಎಂದರು.

ಈ ಸರಕಾರ ಉತ್ತಮ ಆಡಳಿತ ನೀಡಲಿದೆ. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ