ಆ್ಯಪ್ನಗರ

ಗಣೀಶ ಚತುರ್ಥಿಗೆ ಯಾವುದೇ ನಿಬಂಧನೆ ಹೇರಿಲ್ಲ: ಪೊಲೀಸ್‌ ಮುಖ್ಯಸ್ಥರ ಸ್ಪಷ್ಟನೆ

ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಸರಕಾರ ಅಥವಾ ಪೊಲೀಸ್‌ ಇಲಾಖೆಯಿಂದ ಯಾವುದೇ ನಿಬಂಧನೆ ವಿಧಿಸಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಆರ್‌.ಕೆ.ದತ್ತ ಸ್ಪಷ್ಟಪಡಿಸಿದರು.

ವಿಕ ಸುದ್ದಿಲೋಕ 13 Aug 2017, 9:00 am

ಬೆಂಗಳೂರು: ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಸರಕಾರ ಅಥವಾ ಪೊಲೀಸ್‌ ಇಲಾಖೆಯಿಂದ ಯಾವುದೇ ನಿಬಂಧನೆ ವಿಧಿಸಿಲ್ಲ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಆರ್‌.ಕೆ.ದತ್ತ ಸ್ಪಷ್ಟಪಡಿಸಿದರು.

ಬೆಂಗಳೂರಿನ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌.ಕೆ ದತ್ತ, ''ರಸ್ತೆಯಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲು 10 ಲಕ್ಷ ರೂ. ಬಾಂಡ್‌ ಇಡಬೇಕು. ವಿಗ್ರಹದ ಎತ್ತರಕ್ಕೆ ಮಿತಿ, ನಿರ್ಧಿಷ್ಟ ಬಣ್ಣದ ಬಳಕೆ, ಮೆರವಣಿಗೆ ವೇಳೆ ಸಿಡಿಮದ್ದು ಸಿಡಿಸಬಾರದು, ಬಣ್ಣ ಎರಚಬಾರದು, ಡಿ.ಜೆ ಬಳಸಬಾರದು ಎಂಬ ನಿಬಂಧನೆಗಳನ್ನು ಪೊಲೀಸ್‌ ಇಲಾಖೆ ವಿಧಿಸಿದೆ ಎಂದು ಹಿಂದೂ ಸಂಘಟನೆಯೊಂದು ಆರೋಪಿಸಿದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ಆದರೆ, ಈ ರೀತಿಯ ಯಾವುದೇ ನಿಬಂಧನೆ ವಿಧಿಸಿಲ್ಲ. ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು'' ಎಂದು ಮನವಿ ಮಾಡಿದರು.

''ಪೊಲೀಸ್‌ ಇಲಾಖೆ ಒಂದು ಪಕ್ಷ ದ ಪರವಾಗಿ ಕೆಲಸ ಮಾಡುತ್ತಿದೆ. ಹಿಂದೂ ಧರ್ಮ ವಿರೋಧಿಯಾಗಿದೆ ಎಂದು ಸಂಘಟನೆಯೊಂದು ಗಂಭೀರ ಆರೋಪ ಮಾಡುತ್ತಿದೆ. ಆದರೆ, ಪೊಲೀಸ್‌ ಇಲಾಖೆಗೆ ರಾಜಕೀಯ ಪಕ್ಷ ಗಳ ಪರವಾಗಿ ಕೆಲಸ ಮಾಡುವ ಅಗತ್ಯವಿಲ್ಲ. ಸಾರ್ವಜನಿಕರಿಗೆ ರಕ್ಷ ಣೆ ಒದಗಿಸುವುದು ಇಲಾಖೆಯ ಮುಖ್ಯ ಉದ್ದೇಶ'' ಎಂದರು.

''ಗಣೇಶ ಹಬ್ಬದ ವೇಳೆ ಬಂದೋಬಸ್ತ್‌ ಕೈಗೊಳ್ಳುವುದು ಆಯಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ನಗರ ಪೊಲೀಸ್‌ ಆಯುಕ್ತರ ಹೊಣೆಯಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿ ಅವರು ಕ್ರಮ ಕೈಗೊಳ್ಳುತ್ತಾರೆ. ಹಬ್ಬಕ್ಕೆ ಮುನ್ನ ಪ್ರತಿ ವರ್ಷದಂತೆ ಈ ವರ್ಷವೂ ಶಾಂತಿ ಸಭೆ ನಡೆಸುವುದು, ವಿವಿಧ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳುವುದು ಸೇರಿದಂತೆ ಕೆಲ ಸಾಮಾನ್ಯ ಸೂಚನೆಗಳನ್ನು ಪಾಲನೆ ಮಾಡಬೇಕಾಗುತ್ತದೆ'' ಎಂದು ಆರ್‌.ಕೆ ದತ್ತ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆಗೆ ಭದ್ರತೆ

ಆ.15ರ ಸ್ವಾತಂತ್ರ್ಯ ದಿನಾಚರಣೆ ವೇಳೆ ಬೆಂಗಳೂರು, ಮೈಸೂರು ಸೇರಿದಂತೆ ಎಲ್ಲ ನಗರ, ಪಟ್ಟಣಗಳಲ್ಲಿ ಸೂಕ್ತ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸ್ಥಳೀಯ ಪೊಲೀಸರು ಹಾಗೂ ಕೇಂದ್ರ ಭದ್ರತಾ ಪಡೆಗಳನ್ನು ಜಂಟಿಯಾಗಿ ಪ್ರಮುಖ ಸ್ಥಳಗಳಲ್ಲಿ ಭದ್ರತೆಗೆ ನಿಯೋಜಿಸಲಾಗುವುದು ಎಂದು ಪೊಲೀಸ್‌ ಮಹಾ ನಿರ್ದೇಶಕ ಆರ್‌.ಕೆ ದತ್ತ ತಿಳಿಸಿದರು.

ವರ್ಗಾವಣೆಯಲ್ಲಿ ರಾಜಕೀಯವಿಲ್ಲ

ಇತ್ತೀಚೆಗೆ ಹಲವು ಐಪಿಸ್‌ ಅಧಿಕಾರಿಗಳ ದಿಢೀರ್‌ ವರ್ಗಾವಣೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ಪೊಲೀಸ್‌ ಮುಖ್ಯಸ್ಥ ಆರ್‌.ಕೆ.ದತ್ತ, ''ಪೊಲೀಸ್‌ ಅಧಿಕಾರಿಗಳ ವರ್ಗಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪವಾಗಿಲ್ಲ. ಎಲ್ಲ ಪ್ರಕ್ರಿಯೆಗಳು ಪೊಲೀಸ್‌ ಎಸ್ಟಾಬ್ಲಿಷ್‌ಮೆಂಟ್‌ ಬೋರ್ಡ್‌ ಮೂಲಕವೇ ನಡೆದಿದೆ. ಇದೊಂದು ಸಾಮಾನ್ಯ ಪ್ರಕ್ರಿಯೆ'' ಎಂದರು.

ಗಣೇಶ ಪ್ರತಿಷ್ಠಾಪನೆ ಕುರಿತು ಇಲ್ಲ ಸಲ್ಲದ ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

Vijaya Karnataka Web no provision imposed clarified by police chief
ಗಣೀಶ ಚತುರ್ಥಿಗೆ ಯಾವುದೇ ನಿಬಂಧನೆ ಹೇರಿಲ್ಲ: ಪೊಲೀಸ್‌ ಮುಖ್ಯಸ್ಥರ ಸ್ಪಷ್ಟನೆ

- ಆರ್‌.ಕೆ ದತ್ತ, ಪೊಲೀಸ್‌ ಮಹಾ ನಿರ್ದೇಶಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ