ಬಾಗಲಕೋಟ: ಬಿಜೆಪಿ ಮತ್ತು ಜೆಡಿಎಸ್ ಚುನಾವಣೆ ಹಿನ್ನೆಲೆಯಲ್ಲಿ ಯಾತ್ರೆಗಳನ್ನು ಕೈಗೊಂಡಿದೆ. ಆದರೆ ಕಾಂಗ್ರೆಸ್ ನಿಂದ ಯಾತ್ರೆ ಹಮ್ಮಿಕೊಳ್ಳುವ ಉದ್ದೇಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿಯಲ್ಲಿ ಸಂಗಮೇಶ್ವರ ಮಹಾರಾಜರ ಪುಣ್ಯತಿಥಿಯಲ್ಲಿ ಭಾಗವಹಿಸುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿಯವರದ್ದು ನಾಲ್ಕು ವರ್ಷದಲ್ಲಿ ಸಾಧನೆಯೂ ಇಲ್ಲ ವಿಕಾಸವೂ ಇಲ್ಲ. ಇನ್ನು ಜೆಡಿಎಸ್ನಿಂದಲೂ ಯಾವುದೇ ಸಾಧನೆ ಇಲ್ಲ. ಆದರೂ ಜೆಡಿಎಸ್ ನಾಯಕರು ವಿಕಾಸ ಯಾತ್ರೆ ಎನ್ನುತ್ತಿದ್ದಾರೆ. ನಮ್ಮ ಸರಕಾರದ ಸಾಧನೆಗಳನ್ನು ನಾವು ಜನರ ಎದುರಿಗೆ ಇಡುತ್ತೇವೆ ಎಂದರು.
ಬಿಜೆಪಿಯವರು ಅಧಿವೇಶನ ಕ್ಕೆ ಮುತ್ತಿಗೆ ಹಾಕುವ ಮೊದಲು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡಿಸಲಿ. ಸಂಸತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿ ಎಂದು ತಿರುಗೇಟು ನೀಡಿದರು.
ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಸ್ಕೆಚ್ ಹಾಕಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಉತ್ತರ ನೀಡಿದ ಅವರು ' ಪಕ್ಷದ ಅಧ್ಯಕ್ಷ ನಾಗಿ ದುಡಿದ ನನ್ನನ್ನು ಪಕ್ಷದಿಂದ ಕಿತ್ತು ಹಾಕಲಾಯಿತು. ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ' ಎಂದರು.
No Rally from Congress: CM
ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿಯಲ್ಲಿ ಸಂಗಮೇಶ್ವರ ಮಹಾರಾಜರ ಪುಣ್ಯತಿಥಿಯಲ್ಲಿ ಭಾಗವಹಿಸುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿಯವರದ್ದು ನಾಲ್ಕು ವರ್ಷದಲ್ಲಿ ಸಾಧನೆಯೂ ಇಲ್ಲ ವಿಕಾಸವೂ ಇಲ್ಲ. ಇನ್ನು ಜೆಡಿಎಸ್ನಿಂದಲೂ ಯಾವುದೇ ಸಾಧನೆ ಇಲ್ಲ. ಆದರೂ ಜೆಡಿಎಸ್ ನಾಯಕರು ವಿಕಾಸ ಯಾತ್ರೆ ಎನ್ನುತ್ತಿದ್ದಾರೆ. ನಮ್ಮ ಸರಕಾರದ ಸಾಧನೆಗಳನ್ನು ನಾವು ಜನರ ಎದುರಿಗೆ ಇಡುತ್ತೇವೆ ಎಂದರು.
ಬಿಜೆಪಿಯವರು ಅಧಿವೇಶನ ಕ್ಕೆ ಮುತ್ತಿಗೆ ಹಾಕುವ ಮೊದಲು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡಿಸಲಿ. ಸಂಸತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿ ಎಂದು ತಿರುಗೇಟು ನೀಡಿದರು.
ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಸ್ಕೆಚ್ ಹಾಕಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಉತ್ತರ ನೀಡಿದ ಅವರು ' ಪಕ್ಷದ ಅಧ್ಯಕ್ಷ ನಾಗಿ ದುಡಿದ ನನ್ನನ್ನು ಪಕ್ಷದಿಂದ ಕಿತ್ತು ಹಾಕಲಾಯಿತು. ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ' ಎಂದರು.
No Rally from Congress: CM