ಆ್ಯಪ್ನಗರ

ಡಿವೈಎಸ್ಪಿ ಪ್ರಕರಣದಲ್ಲಿ ಜಾರ್ಜ್‌ ಪುನಃ ರಾಜೀನಾಮೆ ಇಲ್ಲ: ಸಿಎಂ

ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಅವರಿಂದ ರಾಜೀನಾಮೆ ಪಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Vijaya Karnataka Web 27 Oct 2017, 3:07 pm
ಬೆಂಗಳೂರು: ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಅವರಿಂದ ರಾಜೀನಾಮೆ ಪಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
Vijaya Karnataka Web no resignation by minister george says cm
ಡಿವೈಎಸ್ಪಿ ಪ್ರಕರಣದಲ್ಲಿ ಜಾರ್ಜ್‌ ಪುನಃ ರಾಜೀನಾಮೆ ಇಲ್ಲ: ಸಿಎಂ


ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ನೆಲೆಯಲ್ಲಿ ಅವರು ರಾಜೀನಾಮೆ ಕೊಟ್ಟಿದ್ದರು. ಮತ್ತೊಮ್ಮೆ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದು ಸಿಎಂ ಹೇಳಿದರು.

ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಅವರನ್ನು ಮೊದಲನೇ ಆರೋಪಿ ಎಂದು ಸಿಬಿಐ ಎಫ್‌ಐಆರ್‌ನಲ್ಲಿ ದಾಖಲಿಸಿದೆ. ಪೊಲೀಸ್‌ ಅಧಿಕಾರಿಗಳಾದ ಐಜಿ ಪ್ರಣಬ್‌ ಮೊಹಂತಿ 2ನೇ ಆರೋಪಿ, ಎ.ಎಂ. ಪ್ರಸಾದ್‌ ಮೂರನೇ ಆರೋಪಿಗಳಾಗಿದ್ದಾರೆ.

ಡಿವೈಎಸ್‌ಪಿ ಗಣಪತಿ ಅವರು ಮಡಿಕೇರಿಯಲ್ಲಿ ಜುಲೈ 7ರಂದು ಆತ್ಮಹತ್ಯೆಕೊಂಡಿದ್ದರು. ಅದಕ್ಕೂ ಮೊದಲು ಸ್ಥಳೀಯ ವಾಹಿನಿಗೆ ಸಂರ್ದಶನ ನೀಡಿ ಜಾರ್ಜ್‌, ಪ್ರಣಬ್‌ ಮೊಹಂತಿ, ಅಶಿತ್‌ ಮೋಹನ್‌ ಪ್ರಸಾದ್‌ ಕಾರಣ ಎಂದು ಆರೋಪಿಸಿದ್ದರು.

ಸಿಬಿಐ ಎಫ್‌ಐಆರ್‌ ದಾಖಲಿಸಿದ ಬಳಿಕ ಜಾರ್ಜ್‌ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಸಿಎಂ ಹಿರಿಯ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದರು. ಕಾನೂನು ತಜ್ಞರನ್ನು ಸಂಪರ್ಕಿಸಿ ಕಾನೂನಾತ್ಮಕ ಅಂಶಗಳ ಕುರಿತು ಮಾಹಿತಿ ಪಡೆದುಕೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ