ಆ್ಯಪ್ನಗರ

ಪೊಲೀಸ್‌ ಠಾಣೆ ವ್ಯಾಪ್ತಿ ಕೇಳದೆ ಎಫ್‌ಐಆರ್‌

ಸಾರ್ವಜನಿಕರು ನೀಡುವ ದೂರುಗಳನ್ನು ಸ್ವೀಕರಿಸಿ ಎಫ್‌ಐಆರ್‌ಗಳನ್ನು ದಾಖಲು ಮಾಡುವಾಗ ಪೊಲೀಸ್‌ ಠಾಣಾ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲಪೊಲೀಸ್‌ ಠಾಣೆಗಳಿಗೆ ನಿರ್ದೇಶಿಸಿ ಒಂದು ತಿಂಗಳೊಳಗೆ ಆದೇಶ ಹೊರಡಿಸಬೇಕೆಂದು ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

Vijaya Karnataka 20 Sep 2019, 5:00 am
ಬೆಂಗಳೂರು: ಸಾರ್ವಜನಿಕರು ನೀಡುವ ದೂರುಗಳನ್ನು ಸ್ವೀಕರಿಸಿ ಎಫ್‌ಐಆರ್‌ಗಳನ್ನು ದಾಖಲು ಮಾಡುವಾಗ ಪೊಲೀಸ್‌ ಠಾಣಾ ವ್ಯಾಪ್ತಿ ಕೇಳದಂತೆ ರಾಜ್ಯದ ಎಲ್ಲಪೊಲೀಸ್‌ ಠಾಣೆಗಳಿಗೆ ನಿರ್ದೇಶಿಸಿ ಒಂದು ತಿಂಗಳೊಳಗೆ ಆದೇಶ ಹೊರಡಿಸಬೇಕೆಂದು ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
Vijaya Karnataka Web no station limitations for fir says court
ಪೊಲೀಸ್‌ ಠಾಣೆ ವ್ಯಾಪ್ತಿ ಕೇಳದೆ ಎಫ್‌ಐಆರ್‌


ನಗರದ ವಕೀಲ ಎಸ್‌.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್‌ ಓಕ್‌ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ಪೀಠದ ಮುಂದೆ ಗುರುವಾರ ವಿಚಾರಣೆ ಬಂದಿತ್ತು.

''ಜನರು ಯಾವುದೇ ಪೊಲೀಸ್‌ ಠಾಣೆಗೆ ತೆರಳಿ ನೀಡುವ ದೂರು ಆಧರಿಸಿ ಎಫ್‌ ಐ ಆರ್‌ ದಾಖಲಿಸಬೇಕು. ನಂತರ ಆ ಎಫ್‌ ಐ ಆರ್‌ ಅನ್ನು ಸಂಬಂಧಪಟ್ಟ ಪೊಲೀಸ್‌ ಠಾಣೆಗಳಿಗೆ ಕಳುಹಿಸಬೇಕು. ಎಫ್‌ಐಆರ್‌ ದಾಖಲಿಸುವಾಗ ಪೊಲೀಸ್‌ ಠಾಣಾ ವ್ಯಾಪ್ತಿ ಕೇಳಬಾರದು ಹಾಗೂ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲಎಂದು ಎಫ್‌ ಐ ಆರ್‌ ದಾಖಲಿಸಲು ನಿರಾಕರಿಸಬಾರದು'' ಎಂದು ನ್ಯಾಯಪೀಠ ಆದೇಶಿಸಿತು.

''ಒಂದು ವೇಳೆ ಠಾಣಾ ವ್ಯಾಪ್ತಿ ಒಳಗೊಂಡಿಲ್ಲಎಂದು ಜನರು ನೀಡಿರುವ ದೂರು ಸ್ವೀಕರಿಸದೆ ಹೋದರೆ ಅಂತಹ ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಹಾಗೂ ವಿಚಾರಣೆಗೆ ಗುರಿಪಡಿಸಬೇಕು. ಈ ಸಂಬಂಧ ಒಂದು ತಿಂಗಳೊಳಗೆ ರಾಜ್ಯದ ಎಲ್ಲಾ ಪೊಲೀಸ್‌ ಠಾಣಾಧಿಕಾರಿಗಳಿಗೆ ಸೂಚನೆ ನೀಡಿ ಆದೇಶ ಹೊರಡಿಸಬೇಕು,'' ಎಂದು ಡಿಜಿಪಿ ನ್ಯಾಯಪೀಠ ನಿರ್ದೇಶಿಸಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ