ಆ್ಯಪ್ನಗರ

ಮೂರನೇ ದರ್ಜೆ ಪಕ್ಷದಂತೆ ನಮ್ಮನ್ನು ನಡೆಸಿಕೊಳ್ಳದಿರಲಿ!

ಸೀಟು ಹಂಚಿಕೆ ವಿಷಯದಲ್ಲಿ ಜೆಡಿಎಸ್‌ಗೆ ಶರಣಾಗಬಾರದೆಂಬ ಒತ್ತಡ ಕಾಂಗ್ರೆಸ್‌ನಲ್ಲಿ ಬಲವಾಗುತ್ತಿರುವ ಹೊತ್ತಲ್ಲಿಯೇ ಅವರು ಸುದ್ದಿಸಂಸ್ಥೆಗೆ ನೀಡಿರುವ ಈ ಹೇಳಿಕೆ ಮಹತ್ವ ಪಡೆದಿದೆ.

Vijaya Karnataka 15 Jan 2019, 7:25 am
ಬೆಂಗಳೂರು: ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಷಯದಲ್ಲಿ ಜೆಡಿಎಸ್‌ ಅನ್ನು 3ನೇ ದರ್ಜೆ ಪ್ರಜೆಯನ್ನಾಗಿ ಕಾಂಗ್ರೆಸ್‌ ನಡೆಸಿಕೊಳ್ಳಬಾರದು, ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸಬೇಕಾದರೆ 'ಕೊಡು ಕೊಳ್ಳುವ' ನೀತಿಯನ್ನು ಉಭಯ ಪಕ್ಷಗಳು ಅನುಸರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
Vijaya Karnataka Web hdk


ಸೀಟು ಹಂಚಿಕೆ ವಿಷಯದಲ್ಲಿ ಜೆಡಿಎಸ್‌ಗೆ ಶರಣಾಗಬಾರದೆಂಬ ಒತ್ತಡ ಕಾಂಗ್ರೆಸ್‌ನಲ್ಲಿ ಬಲವಾಗುತ್ತಿರುವ ಹೊತ್ತಲ್ಲಿಯೇ ಅವರು ಸುದ್ದಿಸಂಸ್ಥೆಗೆ ನೀಡಿರುವ ಈ ಹೇಳಿಕೆ ಮಹತ್ವ ಪಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕುಸಿಯತೊಡಗಿದ್ದು ಆಡಳಿತ ವಿರೋಧಿ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯೆಂದು ಒಪ್ಪಿಕೊಳ್ಳುವಲ್ಲಿ ಬಿಜೆಪಿ ವಿರೋಧಿ ಪಕ್ಷಗಳಲ್ಲಿ ಒಮ್ಮತದ ಕೊರತೆಯಾಗಿದೆ ಎಂಬುದನ್ನು ಕುಮಾರಸ್ವಾಮಿ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ