ಆ್ಯಪ್ನಗರ

ಮರಾಠ, ಲಿಂಗಾಯತ ಆಯ್ತು ಇದೀಗ ಒಕ್ಕಲಿಗರ ಸರದಿ! ಮೀಸಲಾತಿ, ಅಭಿವೃದ್ದಿ ನಿಗಮ ರಚನೆಗೆ ಬೇಡಿಕೆ

ನಮ್ಮ ಸಮುದಾಯಕ್ಕೂ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು ಹಾಗೂ ಮೀಸಲಾತಿಯನ್ನು ನೀಡಬೇಕು ಎಂದು ರಾಜ್ಯ ಒಕ್ಕಲಿಗ ಒಕ್ಕೂಟದ ಅಧ್ಯಕ್ಷ ಸಿ.ವಿ ದೇವರಾಜ್ ಆಗ್ರಹಿಸಿದ್ದಾರೆ. ಈ ಕುರಿತಾಗಿ ಅವರು ರಾಜ್ಯ ಸರ್ಕಾರದ ಮುಂದೆ ಇಟ್ಟ ಬೇಡಿಕೆ ಹೀಗಿದೆ.

Vijaya Karnataka Web 18 Nov 2020, 12:15 pm
ಬೆಂಗಳೂರು: ಮರಾಠ ಅಭಿವೃದ್ದಿ ನಿಗಮ ಹಾಗೂ ಲಿಂಗಾಯತ ಅಭಿವೃದ್ದಿ ನಿಗಮ ರಚನೆಯ ಬೆನ್ನಲ್ಲೇ ಇನ್ನಿತರ ಸಮುದಾಯಗಳಿಂದಲೂ ನಿಗಮ ರಚನೆ ಹಾಗೂ ಮೀಸಲಾತಿ ಬೇಡಿಕೆಗಳು ಶುರುವಾಗಿದೆ. ಇದೀಗ ಒಕ್ಕಲಿಗರ ಸರದಿ. ತಮ್ಮ ಸಮುದಾಯ ಅಭಿವೃದ್ದಿಗೂ ನಿಗಮ ಮಂಡಳಿ ಹಾಗೂ ಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ.
Vijaya Karnataka Web BS Yediyurappa


ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ ದೇವರಾಜ್‌ ರಾಜ್ಯ ಸರ್ಕಾರಕ್ಕೆ ಈ ಕುರಿತಾಗಿ ಮನವಿ ಮಾಡಿದ್ದು, ಸಮುದಾಯದ ಸರ್ವತೋಮುಖ ಅಭಿವೃದ್ದಿಗಾಗಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನಿಗಮ ಗಲಾಟೆ: ಬಲವಂತದ ಬಂದ್ ಮಾಡಿದ್ರೆ ಕಠಿಣ ಕ್ರಮ, ಬಿಎಸ್‌ವೈ ಎಚ್ಚರಿಕೆ

ರಾಜ್ಯದಲ್ಲಿ ಒಕ್ಕಲಿಗ ಸಮುದಾಯ ಜನಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಸ,ಮಾಜ ಕೃಷಿಯನ್ನೇ ಕಾಯಕವನ್ನಾಗಿಸಿ ಸ್ವೀಕರಿಸಿದೆ. ಆದರೂ ಒಕ್ಕಲಿಗ ಸಮುದಾಯ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ಈ ನಿಟ್ಟಿನಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವೀರಶೈವ - ಲಿಂಗಾಯತ ಅಭಿವೃದ್ದಿ ನಿಗಮ ಮಾದರಿಯಲ್ಲಿಯೇ ಒಕ್ಕಲಿಗರ ಅಭಿವೃದ್ದಿ ನಿಗಮ ರಚನೆ ಮಾಡಬೇಕು. ನಿಗಮಕ್ಕೆ ಕನಿಷ್ಠ 1000 ಕೋಟಿ ಅನುದಾನ ನೀಡಬೇಕು ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಅವರಲ್ಲಿ ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಒಕ್ಕಲಿಗ ಮಠಾಧೀಶರು, ಉಪ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ಸರ್ವ ಪಕ್ಷಗಳ ಮುಖಂಡರ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಸಿ.ವಿ ದೇವರಾಜ್ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ