ಆ್ಯಪ್ನಗರ

ವೀರಶೈವ ಲಿಂಗಾಯತರಿಗೆ ಓಬಿಸಿ ಮೀಸಲಾತಿ, ಸದ್ಯಕ್ಕಿಲ್ಲ ಶಿಫಾರಸು - ಸಂಪುಟ ಸಭೆ ನಿರ್ಧಾರ

1994ರಲ್ಲಿಯೇ ವೀರಶೈವ ಲಿಂಗಾಯತರನ್ನು ಓಬಿಸಿಗೆ ಸೇರಿಸಬೇಕು ಎಂದು ಬೇಡಿಕೆ ಇಡಲಾಗಿದೆ. ಇದರ ಜೊತೆಗೆ ಇನ್ನೂ ಕೆಲವು ಸಮುದಾಯಗಳನ್ನು ಒಳಗೊಂಡು ಸಮಗ್ರ ಅಧ್ಯಯನ ನಡೆಸಿ, ಕೇಂದ್ರಕ್ಕೆ ಶಿಫಾರಸು ಸಲ್ಲಿಸಲು ನಿರ್ಧಾರಿಸಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.

Agencies 27 Nov 2020, 1:19 pm
ಬೆಂಗಳೂರು: ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಕಳುಹಿಸುವ ತೀರ್ಮಾನದಿಂದ ಸಚಿವ ಸಂಪುಟ ಸಭೆ ಸದ್ಯಕ್ಕೆ ಹಿಂದಡಿ ಇಟ್ಟಿದೆ.
Vijaya Karnataka Web madhu swamy
ಸಂಗ್ರಹ ಚಿತ್ರ


ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಈ ವಿಚಾರ ತಿಳಿಸಿದ್ದಾರೆ. 1994ರಲ್ಲಿಯೇ ವೀರಶೈವ ಲಿಂಗಾಯತರನ್ನು ಓಬಿಸಿಗೆ ಸೇರಿಸಬೇಕು ಎಂದು ಬೇಡಿಕೆ ಇಡಲಾಗಿತ್ತು. ಇದರ ಜೊತೆಗೆ ಇನ್ನು ಕೆಲವು ಸಮುದಾಯಗಳನ್ನು ಒಳಗೊಂಡು ಸಮಗ್ರ ಅಧ್ಯಯನ ನಡೆಸಿ, ಕೇಂದ್ರಕ್ಕೆ ಶಿಫಾರಸು ಸಲ್ಲಿಸಲು ನಿರ್ಧಾರಿಸಲಾಗಿದೆ ಎಂದು ತಿಳಿಸಿದರು.

ಈ ಮೀಸಲಾತಿಗೂ ರಾಜ್ಯ ಸರಕಾರಕ್ಕೂ ಸಂಬಂಧ ಇಲ್ಲ. ಕೇಂದ್ರ ಸರಕಾರದ ಕೋಟಾದಡಿಯಲ್ಲಿ ಮೀಸಲಾತಿ ನೀಡಿ ಎಂಬುದು ವೀರಶೈವ - ಲಿಂಗಾಯತರ ಬೇಡಿಕೆ. ಇದಕ್ಕಾಗಿ 1999 ರಿಂದ ವೀರಶೈವ ಮಹಾಸಭಾ ಕೇಂದ್ರ ಸರಕಾರದೊಂದಿಗೆ ಹೋರಾಟ ಮಾಡುತ್ತಾ ಬಂದಿದೆ. ಈ ಸಂಬಂಧ ಮಹಾಸಭಾ ತನ್ನ ಪ್ರಯತ್ನ ಮುಂದುವರಿಸಬೇಕು ಎಂದು ಹೇಳಿದರು.

ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆ. ಇದರ ಹಿಂದೆ ಯಾರ ಮೇಲೆಯೂ ಒತ್ತಡ ಹೇರುವ ಉದ್ದೇಶ ಇಲ್ಲ. ಇತರ ಸಮುದಾಯವನ್ನೂ ಸೇರಿಸಿ, ವಿವರವಾಗಿ ಮಾಹಿತಿ ಕಲೆ ಹಾಕಿ, ಅಧ್ಯಯನ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಈ ಹಿನ್ನೆಲೆಯಲ್ಲಿ ಓಬಿಸಿ ಕೋಟಾಕ್ಕೆ ಸೇರಿಸುವಂತೆ ಶಿಫಾರಸು ಮಾಡುವ ನಿರ್ಧಾರದಿಂದ ಹಿಂದೆ ಸರಿಯಲಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ