ಆ್ಯಪ್ನಗರ

ಅಧಿಕಾರಿಗಳ ವರ್ಗಾವಣೆಗೆ ಅನುಮತಿ ನೀಡಿದ ಚುನಾವಣಾ ಆಯೋಗ

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದರಿಂದ ಅಧಿಕಾರಿಗಳ ವರ್ಗಾವಣೆ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ...

Vijaya Karnataka 1 May 2019, 5:00 am
ಬೆಂಗಳೂರು : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದರಿಂದ ಅಧಿಕಾರಿಗಳ ವರ್ಗಾವಣೆ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ.
Vijaya Karnataka Web officer transfar green signal
ಅಧಿಕಾರಿಗಳ ವರ್ಗಾವಣೆಗೆ ಅನುಮತಿ ನೀಡಿದ ಚುನಾವಣಾ ಆಯೋಗ


ನಾನಾ ಇಲಾಖೆಗಳಿಗೆ ಅಧಿಕಾರಿಗಳ ನಿಯುಕ್ತಿ ಮಾಡಬೇಕಿರುವುದರಿಂದ ವರ್ಗಾವಣೆಗೆ ಅವಕಾಶ ನೀಡುವಂತೆ ಚುನಾವಣಾ ಆಯೋಗಕ್ಕೆ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿದ್ದರು. ಈ ಬಗ್ಗೆ ಪರಿಶೀಲನೆ ಕೈಗೊಂಡ ಆಯೋಗ ವರ್ಗಾವಣೆ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದೆ. ಆದರೆ, ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಮತ್ತು ಕಲಬುರ್ಗಿ ಜಿಲ್ಲೆಯಲ್ಲಿ ವರ್ಗಾವಣೆಗೆ ನಿರ್ಬಂಧ ಹೇರಲಾಗಿದೆ.

ಚುನಾವಣೆ ಆಯೋಗದಿಂದ ಅನುಮತಿ ಸಿಕ್ಕಿರುವುದರಿಂದ ನಾನಾ ಇಲಾಖೆ, ನಿಗಮ ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ವರ್ಗಾವಣೆ/ ಸ್ಥಳ ನಿಯುಕ್ತಿಗೆ ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ಮುಖ್ಯ ಕಾರ್ಯದರ್ಶಿ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ