ಆ್ಯಪ್ನಗರ

ನಿಗಮ, ಮಂಡಳಿ ಅಧ್ಯಕ್ಷ, ಸದಸ್ಯರ ಅಧಿಕಾರಾವಧಿ ಅಂತ್ಯ

ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ನೇಮಕ ಮಾಡಿದ್ದ ನಾನಾ ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಇನ್ನಿತರ ಸಂಸ್ಥೆಗಳ ನಾಮನಿರ್ದೇಶಿತ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ 980ಕ್ಕೂ ಹೆಚ್ಚು ಸದಸ್ಯರ ಅಧಿಕಾರಕ್ಕೆ ತೆರೆಬಿದ್ದಿದೆ.

Vijaya Karnataka 29 May 2018, 8:19 am
ಬೆಂಗಳೂರು: ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ನೇಮಕ ಮಾಡಿದ್ದ ನಾನಾ ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಇನ್ನಿತರ ಸಂಸ್ಥೆಗಳ ನಾಮನಿರ್ದೇಶಿತ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ 980ಕ್ಕೂ ಹೆಚ್ಚು ಸದಸ್ಯರ ಅಧಿಕಾರಕ್ಕೆ ತೆರೆಬಿದ್ದಿದೆ.
Vijaya Karnataka Web vidhanasoudha


ಸಿಎಂ ಕುಮಾರಸ್ವಾಮಿ ಅವರ ಸೂಚನೆ ಆಧರಿಸಿ 80ಕ್ಕೂ ಹೆಚ್ಚು ನಿಗಮ, ಮಂಡಳಿಗಳ ಎಲ್ಲ ಅಧಿಕಾರೇತರರ ನಾಮನಿರ್ದೇಶನ ಅವಧಿ ಅಂತ್ಯಗೊಳಿಸಿ ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಮುಂದಿನ ನಾಮನಿರ್ದೇಶನದ ವರೆಗೆ ನಿಗಮ, ಮಂಡಳಿ ಮತ್ತು ಸಂಸ್ಥೆಗಳಿಗೆ ಆಯಾ ಇಲಾಖಾ ವ್ಯಾಪ್ತಿಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಬೇಕು ಎಂದು ಆದೇಶಿಸಲಾಗಿದೆ. ಈ ಸಂಬಂಧ 'ವಿಕ' ಪತ್ರಿಕೆಯು ಭಾನುವಾರ ಸುದ್ದಿ ಪ್ರಕಟಿಸಿತ್ತು.

ಸರಕಾರ ಬದಲಾದ ಹಿನ್ನೆಲೆಯಲ್ಲಿ ಕೆಲವು ನಿಗಮಗಳ ಅಧ್ಯಕ್ಷ, ಉಪಾಧ್ಯಕ್ಷರಾಗಿದ್ದ ಶಾಸಕರು ರಾಜೀನಾಮೆ ನೀಡಿದ್ದು ಹೊರತುಪಡಿಸಿದರೆ ಉಳಿದ ಅಧ್ಯಕ್ಷ, ಉಪಾಧ್ಯಕ್ಷ , ನಿರ್ದೇಶಕ ಮತ್ತು ಸದಸ್ಯರು ಸ್ಥಾನಮಾನ ಬಿಟ್ಟುಕೊಟ್ಟಿರಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ