ಆ್ಯಪ್ನಗರ

ಕಾಲುವೆ ದುರಸ್ತಿ, ಕೆರೆ ಭರ್ತಿಗೊಳಿಸಲು ಆದೇಶ: ಡಿಕೆಶಿ

ದಾಖಲೆ ಪ್ರಮಾಣದಲ್ಲಿ ರಾಜ್ಯದ ಜಲಾಶಯಗಳಿಗೆ ನೀರು ಹರಿದು ಬಂದಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಕಾಲುವೆಗಳನ್ನು ದುರಸ್ತಿಗೊಳಿಸಿ ಕೆರೆಗಳನ್ನು ತುಂಬಿಸಲು ಆದೇಶಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Vijaya Karnataka Web 18 Aug 2018, 12:04 pm
ಬೆಂಗಳೂರು: ದಾಖಲೆ ಪ್ರಮಾಣದಲ್ಲಿ ರಾಜ್ಯದ ಜಲಾಶಯ ಗಳಿಗೆ ನೀರು ಹರಿದು ಬಂದಿದೆ.ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಕಾಲುವೆಗಳನ್ನು ದುರಸ್ತಿಗೊಳಿಸಿ ಕೆರೆಗಳನ್ನು ತುಂಬಿಸಲು ಆದೇಶಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
Vijaya Karnataka Web dk shivakumar2


ದಕ್ಷಿಣ ಕನ್ನಡ,ಕೊಡಗು ಚಿಕ್ಕಮಗಳೂರು ಜಿಗಳಲ್ಲಿ ಅತಿವೃಷ್ಟಿಯಿಂದ ಅನಾಹುತಗಳಾಗಿವೆ. ಅಲ್ಲೆಲ್ಲ ನೀರಾವರಿ ಇಲಾಖೆಯ ಎಂಜಿನಿಯರ್‌ಗಳು ಮತ್ತು ಗುತ್ತಿಗೆದಾರರು ಅಗತ್ಯ ನೆರವು ನೀಡುವಂತೆ ಆದೇಶಿಸಲಾಗಿದೆ. ನೀರಾವರಿ ಇಲಾಖೆಯ ಗುತ್ತಿಗೆದಾರರ ಯಂತ್ರೋಪಕರಣಗಳನ್ನು ಬಳಕೆ ಮಾಡಿಕೊಂಡು ರಸ್ತೆ ಕ್ಲಿಯರ್ ಮಾಡಿಸಲು ಸೂಚಿಸಲಾಗಿದೆ
ಎಂದರು.

ಮಹದಾಯಿ ವಿವಾದ ಕುರಿತಂತೆ ಮೇಲ್ಮನವಿ ಸಲ್ಲಿಸುವುದು ನಿಶ್ಚಿತ, ಈ ಸಂಬಂಧ ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಲಾಗುತ್ತಿದೆ. ನಮ್ಮ ನೀರಿನ ಹಕ್ಕು ಉಳಿಸಿಕೊಳ್ಳುತ್ತೇವೆ ಎಂದು ಸಚಿವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ