ಆ್ಯಪ್ನಗರ

ಆಸ್ಕರ್ ಫರ್ನಾಂಡಿಸ್ ಅಜಾತ ಶತ್ರು: ಸಿಎಂ ಬಸವರಾಜ ಬೊಮ್ಮಾಯಿ

ಸೋಮವಾರ ನಿಧನರಾದ ಕೇಂದ್ರದ ಮಾಜಿ ಸಚಿವ, ರಾಜ್ಯಸಭೆ ಸಂಸದ ಆಸ್ಕರ್ ಫರ್ನಾಂಡಿಸ್ ಅವರು ಅಜಾತ ಶತ್ರುವಾಗಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.

Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 14 Sep 2021, 11:03 am

ಹೈಲೈಟ್ಸ್‌:

  • ಆಸ್ಕರ್ ಫರ್ನಾಂಡಿಸ್ ಸಜ್ಜನ ಹಾಗೂ ಜನಪರ ರಾಜಕಾರಣಿಯಾಗಿದ್ದರು
  • ಕೇಂದ್ರ ಸಚಿವರಾಗಿ ಆಸ್ಕರ್ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ
  • ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಣೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Basavaraj Bommai
ಬೆಂಗಳೂರು: ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಓರ್ವ ಅಜಾತಶತ್ರು, ರಾಜ್ಯಕ್ಕೆ ಅವರ ಕೊಡುಗೆ ಅಪಾರವಾದದ್ದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಸೋಮವಾರ ನಿಧನರಾದ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭೆ ಸಂಸದ ಆಸ್ಕರ್ ಫರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಆಸ್ಕರ್ ಫರ್ನಾಂಡಿಸ್ ಕೇಂದ್ರ ಸಚಿವರಾಗಿ ಆಡಳಿತ ಮಾಡಿದ್ದಾರೆ ಹಾಗೂ ರಾಜ್ಯಕ್ಕೆ ಅವರ ಕೊಡುಗೆ ಅಪಾರವಾದುದ್ದು ಎಂದು ನೆನಪಿಸಿಕೊಂಡರು.
ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಕೆಪಿಸಿಸಿ‌ ಕಚೇರಿಯಲ್ಲಿ ಸಂತಾಪ ಸಭೆ: ಅಗಲಿದ ನಾಯಕನ ಸ್ಮರಿಸಿದ ಕಾಂಗ್ರೆಸ್
ಕರ್ನಾಟಕದ ಬಗ್ಗೆ ಅವರು ಬಹಳ ಪ್ರೀತಿ ಹೊಂದಿದ್ದರು. ಆಸ್ಕರ್ ಫರ್ನಾಂಡಿಸ್ ಅವರು ಶ್ರಮಜೀವಿಯಾಗಿದ್ದವರು. ಮೃದು ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿದ್ದ ಅವರು ಓರ್ವ ಅಜಾತ ಶತ್ರು ಎಂದು ಹೇಳಿದರು.

ಆಸ್ಕರ್ ಸಜ್ಜನ ಹಾಗೂ ಜನಪರ ರಾಜಕಾರಣಿ‌.‌ ಅವರ ಅಗಲಿಕೆ ಬಹಳ ದುಃಖ ತಂದಿದೆ. ಅವರು ಕಲೆ‌ ಸಂಗೀತದ ಮೇಲೆ ಆಸಕ್ತಿಯುಳ್ಳವರು ಹಾಗೂ ಬಹಳ ಉತ್ಸಾಹಿಯಾಗಿದ್ದವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಸೋಮವಾರ ನಿಧನರಾಗಿದ್ದರು. ಜುಲೈನಲ್ಲಿ ತಮ್ಮ ನಿವಾಸದಲ್ಲಿ ಯೋಗಾಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಬಿದ್ದು ಗಾಯಗೊಂಡಿದ್ದರು. ಅವರ ಮಿದುಳಿಗೆ ಗಾಯವಾಗಿದ್ದರಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಶಸ್ತ್ರಚಿಕಿತ್ಸೆ ಸಹ ನಡೆಸಲಾಗಿತ್ತು. ಬಳಿಕ ಅವರು ಕೊಂಚ ಸುಧಾರಿಸಿಕೊಂಡಂತೆ ಕಂಡರೂ, ಸಂಪೂರ್ಣ ಗುಣಮುಖರಾಗಿರಲಿಲ್ಲ.
9 ಬಾರಿಯ ಸಂಸದ, ಗಾಂಧಿ ಕುಟುಂಬದ ಆಪ್ತ ಆಸ್ಕರ್‌ ಫೆರ್ನಾಂಡಿಸ್‌ ಇನ್ನಿಲ್ಲ
ಮೂರು ದಿನ ಅಂತಿಮ ದರ್ಶನಕ್ಕೆ ಅವಕಾಶಆಸ್ಕರ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಉಡುಪಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.‌ ಮಧ್ಯಾಹ್ನದ ಬಳಿಕ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು. ಸೆ. 15ರಂದು ಮಂಗಳೂರಿನ ಮಿಲಾಗ್ರೆಸ್ ಚರ್ಚ್‌ನಲ್ಲಿ ಬೆಳಿಗ್ಗೆಯಿಂದ ದರ್ಶನಕ್ಕೆ ಇರಿಸಲಾಗುತ್ತದೆ. ಸಂಜೆ ಬೆಂಗಳೂರಿಗೆ ತರಲಾಗುತ್ತದೆ. ಸೆಪ್ಟೆಂಬರ್ 16 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅದೇ ದಿನ ಸಂಜೆ ಹೊಸೂರಿನ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ