ಬೆಂಗಳೂರು: ಭಾರತದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾದದ್ದು. ಸಂವಿಧಾನದ ಆಶಯಗಳನ್ನು ಈಡೇರಿಸಲು ಎಲ್ಲರೂ ಕೈಜೋಡಿಸಬೇಕಿದೆ. ಕನ್ನಡದಲ್ಲಿ ಕೃತಿ ಬಂದಿರುವುದರಿಂದ ವಿದ್ಯಾರ್ಥಿಗಳು, ಸಂಶೋಧಕರಿಗೆ ಉತ್ತಮ ಆಕರ ಗ್ರಂಥವಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಡಾ.ಸಿ.ಎಸ್.ದ್ವಾರಕನಾಥ್ ಕನ್ನಡದಲ್ಲಿ ಬರೆದಿರುವ 'ಭಾರತ ಸಂವಿಧಾನ' ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ಸಂವಿಧಾನ ಕೃತಿ ಲೋಕಾರ್ಪಣೆ ಮಾಡಿದ್ದು ಖುಷಿ ಕೊಟ್ಟಿದೆ. ಸಂವಿಧಾನಕ್ಕೆ ಸಂಬಂಧಿಸಿದ ದಾಖಲೆಗಳು ಈ ಕೃತಿಯಲ್ಲಿ ಅಡಕವಾಗಿದೆ. ಸ್ಥಳೀಯ ಭಾಷೆಯಲ್ಲಿ ಸಂವಿಧಾನದ ಬಗ್ಗೆ ಅರ್ಥ ಮಾಡಿಕೊಳ್ಳಲು ಈ ಕೃತಿ ಅನುಕೂಲವಾಗಿದೆ. ಇದು ಕನ್ನಡದಲ್ಲಿ ಬಂದಿರುವ ಅಮೂಲ್ಯವಾದ ಕೃತಿಯಾಗಿದೆ ಎಂದರು.
ಭಾರತದ ಸಂವಿಧಾನ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ. ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಪ್ರತಿ ವಿತರಣೆ ಮಾಡಲಾಗುವುದು ವಿಧಾನ ಮಂಡಲದಲ್ಲಿ ಭಾರತೀಯ ಸಂವಿಧಾನದ ಕುರಿತಾಗಿ ಎರಡು ದಿನಗಳ ಕಾಲ ಚರ್ಚೆ ನಡೆಯಲಿದೆ. ಸಂವಿಧಾನದ ಆಶಯಗಳನ್ನು ಯಶಸ್ಸಿಯಾಗಿ ಜಾರಿಗೆ ತರುವ ಹೊಣೆಗಾರಿಕೆ ನಮ್ಮ ಮೇಲಿದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಮುಂದಿನ ಮಾ.3 ಹಾಗೂ 4ರಂದು ವಿಧಾನಮಂಡಲದಲ್ಲಿ ಸಂವಿಧಾನದ ಚರ್ಚೆಗೆ ಅವಕಾಶ ನೀಡಲಾಗಿದೆ. ಇದಕ್ಕೆ ಸ್ಪೀಕರ್ ಒಪ್ಪಿಗೆ ಸೂಚಿಸಿದ್ದಾರೆ. ಸಂವಿಧಾನದ ಆಶಯಗಳನ್ನು ಆಧರಿಸಿ ನಮ್ಮ ಸರಕಾರವನ್ನು ಮುನ್ನೆಡೆಸಲು ಆದ್ಯತೆ ನೀಡಿರುವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರು ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಡಾ.ಸಿ.ಎಸ್.ದ್ವಾರಕನಾಥ್ ಕನ್ನಡದಲ್ಲಿ ಬರೆದಿರುವ 'ಭಾರತ ಸಂವಿಧಾನ' ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.
ಸಂವಿಧಾನ ಕೃತಿ ಲೋಕಾರ್ಪಣೆ ಮಾಡಿದ್ದು ಖುಷಿ ಕೊಟ್ಟಿದೆ. ಸಂವಿಧಾನಕ್ಕೆ ಸಂಬಂಧಿಸಿದ ದಾಖಲೆಗಳು ಈ ಕೃತಿಯಲ್ಲಿ ಅಡಕವಾಗಿದೆ. ಸ್ಥಳೀಯ ಭಾಷೆಯಲ್ಲಿ ಸಂವಿಧಾನದ ಬಗ್ಗೆ ಅರ್ಥ ಮಾಡಿಕೊಳ್ಳಲು ಈ ಕೃತಿ ಅನುಕೂಲವಾಗಿದೆ. ಇದು ಕನ್ನಡದಲ್ಲಿ ಬಂದಿರುವ ಅಮೂಲ್ಯವಾದ ಕೃತಿಯಾಗಿದೆ ಎಂದರು.
ಭಾರತದ ಸಂವಿಧಾನ ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ. ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಪ್ರತಿ ವಿತರಣೆ ಮಾಡಲಾಗುವುದು ವಿಧಾನ ಮಂಡಲದಲ್ಲಿ ಭಾರತೀಯ ಸಂವಿಧಾನದ ಕುರಿತಾಗಿ ಎರಡು ದಿನಗಳ ಕಾಲ ಚರ್ಚೆ ನಡೆಯಲಿದೆ. ಸಂವಿಧಾನದ ಆಶಯಗಳನ್ನು ಯಶಸ್ಸಿಯಾಗಿ ಜಾರಿಗೆ ತರುವ ಹೊಣೆಗಾರಿಕೆ ನಮ್ಮ ಮೇಲಿದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಮುಂದಿನ ಮಾ.3 ಹಾಗೂ 4ರಂದು ವಿಧಾನಮಂಡಲದಲ್ಲಿ ಸಂವಿಧಾನದ ಚರ್ಚೆಗೆ ಅವಕಾಶ ನೀಡಲಾಗಿದೆ. ಇದಕ್ಕೆ ಸ್ಪೀಕರ್ ಒಪ್ಪಿಗೆ ಸೂಚಿಸಿದ್ದಾರೆ. ಸಂವಿಧಾನದ ಆಶಯಗಳನ್ನು ಆಧರಿಸಿ ನಮ್ಮ ಸರಕಾರವನ್ನು ಮುನ್ನೆಡೆಸಲು ಆದ್ಯತೆ ನೀಡಿರುವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರು ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.