ಪಾಕ್ ಧ್ವಜ ಹಾರಾಟ: ಪರಶುರಾಮ್ ಆರೋಪ ಮುಕ್ತ
ಸಿಂದಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಾಟ ಪ್ರಕರಣದಲ್ಲಿ ಗೌರಿ ಹತ್ಯೆ ಆರೋಪಿ ಪರಶುರಾಮ ವಾಗ್ಮೋರೆ ಸೇರಿ 6 ಮಂದಿ ಆರೋಪ ಮುಕ್ತರಾಗಿದ್ದಾರೆ.
Vijaya Karnataka Web 23 Jul 2018, 8:31 pm
ವಿಜಯಪುರ: ಸಿಂದಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಾಟ ಪ್ರಕರಣದಲ್ಲಿ ಗೌರಿ ಹತ್ಯೆ ಆರೋಪಿ ಪರಶುರಾಮ ವಾಗ್ಮೋರೆ ಸೇರಿ 6 ಮಂದಿ ಆರೋಪ ಮುಕ್ತರಾಗಿದ್ದಾರೆ.
ಸಿಂದಗಿ ತಹಶೀಲ್ದಾರ್ ಕಚೇರಿ ಎದುರು ಪಾಕ್ ಧ್ವಜಾರೋಹಣ ಪ್ರಕರಣದಲ್ಲಿ ಆರು ಮಂದಿಯನ್ನು ಆರೋಪ ಮುಕ್ತಗೊಳಿಸಿ, ವಿಜಯಪುರ 1ನೇ ಹೆಚ್ಚುವರಿ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶೆ ಗೀತಾ ಕೆ.ಬಿ ಅವರು ಆದೇಶ ನೀಡಿದ್ದಾರೆ. ಜನವರಿ 1, 2012ರಂದು ಪಾಕ್ ಧ್ವಜ ಹಾರಾಟ ಮಾಡಲಾಗಿತ್ತು. ವಾಗ್ಮೋರೆ ಐದನೇ ಆರೋಪಿಯನ್ನಾಗಿಸಲಾಗಿತ್ತು.
ಗೌರಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪರಶುರಾಮ ವಾಗ್ಮೋರೆಯನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ, ತಪ್ಪೊಪ್ಪಿಕೊಂಡಿದ್ದ ವಾಗ್ಮೋರೆ, ನ್ಯಾಯಾಲಯದಲ್ಲಿ ಅಧಿಕಾರಿಗಳ ವಿರುದ್ಧ ಹೇಳಿಕೆ ನೀಡಿದ್ದನು.
ಸಿಂದಗಿ ತಹಶೀಲ್ದಾರ್ ಕಚೇರಿ ಎದುರು ಪಾಕ್ ಧ್ವಜಾರೋಹಣ ಪ್ರಕರಣದಲ್ಲಿ ಆರು ಮಂದಿಯನ್ನು ಆರೋಪ ಮುಕ್ತಗೊಳಿಸಿ, ವಿಜಯಪುರ 1ನೇ ಹೆಚ್ಚುವರಿ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶೆ ಗೀತಾ ಕೆ.ಬಿ ಅವರು ಆದೇಶ ನೀಡಿದ್ದಾರೆ. ಜನವರಿ 1, 2012ರಂದು ಪಾಕ್ ಧ್ವಜ ಹಾರಾಟ ಮಾಡಲಾಗಿತ್ತು. ವಾಗ್ಮೋರೆ ಐದನೇ ಆರೋಪಿಯನ್ನಾಗಿಸಲಾಗಿತ್ತು.
ಗೌರಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪರಶುರಾಮ ವಾಗ್ಮೋರೆಯನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ, ತಪ್ಪೊಪ್ಪಿಕೊಂಡಿದ್ದ ವಾಗ್ಮೋರೆ, ನ್ಯಾಯಾಲಯದಲ್ಲಿ ಅಧಿಕಾರಿಗಳ ವಿರುದ್ಧ ಹೇಳಿಕೆ ನೀಡಿದ್ದನು.