ಬಿಎಸ್ವೈ ಅವರಿಂದ ಇಂಥ ಭಾಷಣ ಬೇಕಿರಲಿಲ್ಲ: ಪರಂ
ಯಡಿಯೂರಪ್ಪ ಸ್ಮೂತ್ ಅಲ್ಲ, ಯಾವಾಗಲೂ ಅವರು ಸ್ವಲ್ಪ ಜಾಸ್ತಿನೇ ಹಾರ್ಡ್. ಇಂತಹ ಭಾಷಣ ಅವಶ್ಯಕತೆ ಇರಲಿಲ್ಲ. ಯಡಿಯೂರಪ್ಪ ಹೇಳಿದ ರೀತಿ ಕಾಂಗ್ರೆಸ್ ನಲ್ಲಿ ವ್ಯವಸ್ಥೆ ಇಲ್ಲ ಎಂದು ಡಿಸಿಎಂ ಪರಮೇಶ್ವರ್ ಹೇಳಿದರು.
Vijaya Karnataka Web 26 May 2018, 12:57 pm
ಬೆಂಗಳೂರು: ಯಡಿಯೂರಪ್ಪ ಸ್ಮೂತ್ ಅಲ್ಲ, ಯಾವಾಗಲೂ ಅವರು ಸ್ವಲ್ಪ ಜಾಸ್ತಿನೇ ಹಾರ್ಡ್. ಇಂತಹ ಭಾಷಣ ಅವಶ್ಯಕತೆ ಇರಲಿಲ್ಲ. ಯಡಿಯೂರಪ್ಪ ಹೇಳಿದ ರೀತಿ ಕಾಂಗ್ರೆಸ್ ನಲ್ಲಿ ವ್ಯವಸ್ಥೆ ಇಲ್ಲ ಎಂದು ಡಿಸಿಎಂ ಪರಮೇಶ್ವರ್ ಹೇಳಿದರು.
ಮೋದಿ ಸರಕಾರದ ನಾಲ್ಕು ವರ್ಷಗಳ ಸಾಧನೆ ಶೂನ್ಯ, ಜನಗಳ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಮತ್ತು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿಯೂ ವಿಫಲರಾಗಿದ್ದಾರೆ ಎಂದರು.
ಸದಾಶಿವನಗರದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಪರಮೇಶ್ಚರ್, ಸಂಜೆ ದೆಹಲಿಗೆ ಹೋಗುತ್ತಿದ್ದೇವೆ. ಸಂಪುಟ ರಚನೆ ವಿಚಾರ, ಪರಿಷತ್ಗೆ ಆಯ್ಕೆ ಹಾಗೂ ಇತರ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕುಮಾರಸ್ವಾಮಿ ದೆಹಲಿ ಬರುವುದಿಲ್ಲ, ಅವರ ಪಕ್ಷದಲ್ಲಿ ಯಾರು ಸಚಿವರಾಗಬೇಕು ಎಂಬುದನ್ನು ಅವರು ಪಟ್ಟಿ ಮಾಡುತ್ತಾರೆ. ಸಚಿವರ ಆಯ್ಕೆಯಲ್ಲಿ ಯಾವ ಮಾನದಂಡ ಅನುಸರಿಸಬೇಕು ಅನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ದೆಹಲಿಯಲ್ಲಿ ಚರ್ಚೆಯಾಗಬಹುದು. ನಾನು 8 ವರ್ಷ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದು, ನನಗಿಂತ ಉತ್ತಮರು ಪಕ್ಷದ ಅಧ್ಯಕ್ಷರಾಗಬೇಕು. ಪಕ್ಷ ಸಂಘಟನೆ ಮಾಡಬೇಕು. ನಾನು ಅಧ್ಯಕ್ಷನಾಗಿ ಮುಂದುವರಿಯುವುದಿಲ್ಲ, ಬೇರೆಯವರಿಗೂ ಅವಕಾಶ ಸಿಗಲಿ. ಪಕ್ಷದ ಸಂಘಟನೆ ಶಕ್ತಿಯುತವಾಗಿ ನಡೆಯಲಿ, ನಾನು ಯಾವ ಖಾತೆಗೂ ಬೇಡಿಕೆ ಇಟ್ಟಿಲ್ಲ. ಯಾವ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಪರಮೇಶ್ವರ್ ಹೇಳಿದರು.
ಮೋದಿ ಸರಕಾರದ ನಾಲ್ಕು ವರ್ಷಗಳ ಸಾಧನೆ ಶೂನ್ಯ, ಜನಗಳ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಮತ್ತು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿಯೂ ವಿಫಲರಾಗಿದ್ದಾರೆ ಎಂದರು.
ಸದಾಶಿವನಗರದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಪರಮೇಶ್ಚರ್, ಸಂಜೆ ದೆಹಲಿಗೆ ಹೋಗುತ್ತಿದ್ದೇವೆ. ಸಂಪುಟ ರಚನೆ ವಿಚಾರ, ಪರಿಷತ್ಗೆ ಆಯ್ಕೆ ಹಾಗೂ ಇತರ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಕುಮಾರಸ್ವಾಮಿ ದೆಹಲಿ ಬರುವುದಿಲ್ಲ, ಅವರ ಪಕ್ಷದಲ್ಲಿ ಯಾರು ಸಚಿವರಾಗಬೇಕು ಎಂಬುದನ್ನು ಅವರು ಪಟ್ಟಿ ಮಾಡುತ್ತಾರೆ. ಸಚಿವರ ಆಯ್ಕೆಯಲ್ಲಿ ಯಾವ ಮಾನದಂಡ ಅನುಸರಿಸಬೇಕು ಅನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ದೆಹಲಿಯಲ್ಲಿ ಚರ್ಚೆಯಾಗಬಹುದು. ನಾನು 8 ವರ್ಷ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದು, ನನಗಿಂತ ಉತ್ತಮರು ಪಕ್ಷದ ಅಧ್ಯಕ್ಷರಾಗಬೇಕು. ಪಕ್ಷ ಸಂಘಟನೆ ಮಾಡಬೇಕು. ನಾನು ಅಧ್ಯಕ್ಷನಾಗಿ ಮುಂದುವರಿಯುವುದಿಲ್ಲ, ಬೇರೆಯವರಿಗೂ ಅವಕಾಶ ಸಿಗಲಿ. ಪಕ್ಷದ ಸಂಘಟನೆ ಶಕ್ತಿಯುತವಾಗಿ ನಡೆಯಲಿ, ನಾನು ಯಾವ ಖಾತೆಗೂ ಬೇಡಿಕೆ ಇಟ್ಟಿಲ್ಲ. ಯಾವ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಪರಮೇಶ್ವರ್ ಹೇಳಿದರು.