ಆ್ಯಪ್ನಗರ

ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಉದ್ದೇಶವಿಲ್ಲ: ಹೈಕೋರ್ಟ್‌ಗೆ ಸರಕಾರದ ಹೇಳಿಕೆ

ಹೊಸದಾಗಿ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಉದ್ದೇಶ ಸದ್ಯಕ್ಕಿಲ್ಲಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ...

Vijaya Karnataka 24 Sep 2019, 5:00 am
ಬೆಂಗಳೂರು: ಹೊಸದಾಗಿ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಉದ್ದೇಶ ಸದ್ಯಕ್ಕಿಲ್ಲಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
Vijaya Karnataka Web parliamentary board secretary
ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಉದ್ದೇಶವಿಲ್ಲ: ಹೈಕೋರ್ಟ್‌ಗೆ ಸರಕಾರದ ಹೇಳಿಕೆ


ನಾನಾ ಇಲಾಖೆಗಳಿಗೆ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದ ಹಿಂದಿನ ಸರಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ಎಂ.ಬಿ.ಆದಿನಾರಾಯಣ ಸಲ್ಲಿಸಿದ್ದ ಪಿಐಎಲ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರಿದ್ದ ವಿಭಾಗೀಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಸರಕಾರಿ ವಕೀಲರಾದ ಬಿ.ವಿ. ಕೃಷ್ಣ, ''ಸಂಸದೀಯ ಕಾರ್ಯದರ್ಶಿಗಳನ್ನು ನೇಮಿಸುವ ಉದ್ದೇಶವಿಲ್ಲ. ಈ ಬಗ್ಗೆ ಅಡ್ವೋಕೇಟ್‌ ಜನರಲ್‌ ಕೋರ್ಟ್‌ ಮುಂದೆ ವಾದ ಮಂಡಿಸಲಿದ್ದಾರೆ,'' ಎಂದು ಪೀಠಕ್ಕೆ ತಿಳಿಸಿದರು. ಇದನ್ನು ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಅ.18ಕ್ಕೆ ಮುಂದೂಡಿತು. ಐವಾನ್‌ ಡಿಸೋಜಾ, ಕೆ. ಅಬ್ದುಲ್‌ ಜಬ್ಬಾರ್‌, ಅಂಜಲಿ ನಿಂಬಾಳ್ಕರ್‌ ಸೇರಿದಂತೆ 8 ಮಂದಿಯನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದನ್ನು ಅರ್ಜಿದಾರರು ಪ್ರಶ್ನಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ