ಆ್ಯಪ್ನಗರ

ರಾಜ್ಯದೆಲ್ಲೆಡೆ ಸಂಭ್ರಮದ ಬಕ್ರೀದ್ ಆಚರಣೆ

ಪ್ರವಾದಿ ಇಬ್ರಾಹೀಮ್ ಅವರ ತ್ಯಾಗ, ಬಲಿದಾನದ ದ್ಯೋತಕವಾಗಿ ಬಕ್ರೀದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತ ರಾಜ್ಯದ ಎಲ್ಲೆಡೆ ಬುಧವಾರ ಆಚರಿಸಲಾಯಿತು.

Vijaya Karnataka Web 22 Aug 2018, 4:20 pm
ಮಂಗಳೂರು: ಪ್ರವಾದಿ ಇಬ್ರಾಹೀಮ್ ಅವರ ತ್ಯಾಗ, ಬಲಿದಾನದ ದ್ಯೋತಕವಾಗಿ ಬಕ್ರೀದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತ ರಾಜ್ಯದ ಎಲ್ಲೆಡೆ ಬುಧವಾರ ಆಚರಿಸಲಾಯಿತು.
Vijaya Karnataka Web Bakrid MNG


ಪ್ರಮುಖ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ನಮಾಝ್, ಧರ್ಮ ಗುರುಗಳಿಂದ ಈದ್ ಸಂದೇಶ ಸಹಿತ ಪ್ರವಚನ, ಪರಸ್ಪರ ಈದ್ ಶುಭಾಶಯ ವಿನಿಯಮ ನಡೆಯಿತು. ಮಂಗಳೂರಿನಲ್ಲಿ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಬ್ಬದ ವಿಶೇಷ ಪ್ರಾರ್ಥನೆ ಹಾಗೂ ಖುತ್ಬಾ ಪ್ರವಚನ ನೀಡಿದರು.

ಏಕದೇವ ವಿಶ್ವಾಸದ ಸಮಾಜ ಸ್ಥಾಪನೆಗಾಗಿ ಪ್ರವಾದಿ ಇಬ್ರಾಹೀಮರು ಇಡೀ ಜೀವನವನ್ನೇ ಮುಡುಪಾಗಿರಿಸಿ, ಹಲವಾರು ಸವಾಲು ಸ್ವಪರೀಕ್ಷೆಗಳನ್ನು ಎದುರಿಸಿ, ತ್ಯಾಗ, ಬಲಿದಾನ ಮಾಡಿದ್ದಾರೆ. ಅವರ ಜೀವನ ಎಲ್ಲರಿಗೂ ಮಾದರಿಯಾಗಲಿ ಎಂದು ಖಾಝಿ ತಮ್ಮ ಪ್ರವಚನದಲ್ಲಿ ಹೇಳಿದರು.

ಝೀನತ್ ಬಕ್ಷ್ ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ವೈ. ಅಬ್ದುಲ್ಲಾ ಕುಂಞಿ ಈದ್ ಸಂದೇಶದಲ್ಲಿ, ತ್ಯಾಗ, ಬಲಿದಾನ ಮತ್ತು ವಾಗ್ದಾನದ ಮನೋಭಾವ ಗಟ್ಟಿಗೊಳಿಸಲು ನಮಗೆ ಬಕ್ರೀದ್ ಪ್ರೇರಣೆ ನೀಡುತ್ತದೆ. ನೆರೆಯ ಕೊಡಗು ಮತ್ತು ಕೇರಳದ ಜನರು ಸಂಕಷ್ಟದಲ್ಲಿದ್ದು, ಅವರಿಗೆ ನೆರವಾಗುವ ಮೂಲಕ ನಿಜಾರ್ಥದಲ್ಲಿ ಹಬ್ಬ ಆಚರಿಸಬೇಕಾದುದು ನಮ್ಮ ಕರ್ತವ್ಯ ಎಂದರು.

ರಾಮನಗರದಲ್ಲಿ ಬಕ್ರೀದ್ ಆಚರಣೆ
ರಾಮನಗರದ ಬೆಂಗಳೂರು ಮೈಸೂರು ಹೆದ್ದಾರಿ ಬದಿಯ ಈದ್ಗಾ ಮೈದಾನದಲ್ಲಿ ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ಸಾಮೂಹಿಕ ಪ್ರಾರ್ಥನೆ ನಡೆಯಿತು. ಪ್ರಾರ್ಥನೆ ಬಳಿಕ ಸ್ಮಶಾನಕ್ಕೆ ತೆರಳಿ ಹಿರಿಯರ ಸಮಾಧಿಗಳಿಗೆ ಗೌರವ ಸಮರ್ಪಿಸಿದರು. ಪರಸ್ಪರ ಆಲಂಗಿಸಿಕೊಂಡು ಶುಭಾಶಯ ಕೋರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ