ಆ್ಯಪ್ನಗರ

ರಾಜ್ಯ, ದೇಶದಲ್ಲಿ ಹೆಚ್ಚಿದ ಕೊರೊನಾ ಆರ್ಭಟ: ಮುನ್ನೆಚ್ಚರಿಕೆ ಇರಲಿ, ನಿರ್ಲಕ್ಷ್ಯ ಸಲ್ಲ

ಕೋವಿಡ್‌ ಪ್ರಕರಣಗಳು ಹೆಚ್ಚಿರುವ 8 ನಗರಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ನಗರವಾಸಿಗಳ ಜತೆಗೆ ಉಳಿದ ನಗರ ಮತ್ತು ಗ್ರಾಮೀಣ ಜನರೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬುದು ಇದರ ಸಂದೇಶ.

Vijaya Karnataka Web 13 Apr 2021, 11:12 pm
ಬೆಂಗಳೂರು: ಕೊರೊನಾ ಸೋಂಕಿನ 2ನೇ ಅಲೆ ರಾಜ್ಯ ಮತ್ತು ದೇಶದಲ್ಲಿ ಶರವೇಗದಿಂದ ಹರಡುತ್ತಿದೆ. ಜನರು ಮುಂಜಾಗ್ರತೆ ವಹಿಸದಿದ್ದರೆ ಪರಿಸ್ಥಿತಿ ಕೈಮೀರುವ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಹೀಗಾಗಿ ಜನರು ಮೈಮರೆತರೆ ಸೋಂಕು ಮತ್ತಷ್ಟು ಪ್ರದೇಶಗಳಿಗೆ ವ್ಯಾಪಿಸುವ ಅಪಾಯವಿದೆ.
Vijaya Karnataka Web ಕೊರೊನಾ
ಕೊರೊನಾ


ಕೋವಿಡ್‌ ಪ್ರಕರಣಗಳು ಹೆಚ್ಚಿರುವ 8 ನಗರಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ನಗರವಾಸಿಗಳ ಜತೆಗೆ ಉಳಿದ ನಗರ ಮತ್ತು ಗ್ರಾಮೀಣ ಜನರೂ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬುದು ಇದರ ಸಂದೇಶ. ದೈನಂದಿನ ಜೀವನದಲ್ಲಿ ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಸೋಂಕು ಹೆಚ್ಚಿ ಲಾಕ್‌ಡೌನ್‌ ಮಾಡಬೇಕಾದ ಪರಿಸ್ಥಿತಿ ಬರಬಹುದು. ಇದಕ್ಕೆ ಅವಕಾಶ ಕೊಡದೆ ಎಲ್ಲರೂ ಕೋವಿಡ್‌ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ತಜ್ಞ ವೈದ್ಯರು, ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ನಗರ ಪ್ರದೇಶದಲ್ಲಿ ವಾಸಿಸುವವರು ಯುಗಾದಿ ಹಬ್ಬ ಆಚರಣೆಗೆ ತಮ್ಮ ಊರುಗಳಿಗೆ ತೆರಳುವುದು ಸಾಮಾನ್ಯ. ಈಗಾಗಲೇ ತಜ್ಞರ ಎಚ್ಚರಿಸಿರುವಂತೆ ತಾವು ಇರುವಲ್ಲೇ ಹಬ್ಬ ಆಚರಿಸುವುದು ಆರೋಗ್ಯದ ದೃಷ್ಟಿಯಿಂದ ಕ್ಷೇಮ. ಒಂದು ವೇಳೆ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೋಗುವವರು ತಮ್ಮ ಜತೆ ಕೊರೊನಾ ಸೋಂಕು ಕೊಂಡೊಯ್ಯುವ ಅಪಾಯವಿದೆ. ಹೀಗಾಗಿ ಇರುವ ಊರುಗಳಲ್ಲೇ ಈ ವರ್ಷ ಹಬ್ಬ ಆಚರಿಸುವುದು ಉತ್ತಮ.

ವಿಕ ಸಲಹೆ: ಇವುಗಳನ್ನು ಪಾಲನೆ ಮಾಡಿ

  • ರಜೆ ಇದ್ದರೂ ಬೇರೆಡೆಗೆ ತೆರಳದೆ ಇರುವಲ್ಲೇ ಹಬ್ಬ ಆಚರಿಸಿ
  • ಊರಿಗೆ ಹೋಗುವುದು ಅನಿವಾರ್ಯವಾದರೆ ಕೋವಿಡ್‌ ನಿಯಮ ತಪ್ಪದೆ ಪಾಲಿಸಿ
  • ಮಾಸ್ಕ್‌ ಧರಿಸುವುದು, ದೈಹಿಕ ಅಂತರ, ಸ್ಯಾನಿಟೈಸರ್‌ ಬಳಕೆ ತಪ್ಪಿಸಲೇಬೇಡಿ
  • ಅನಾರೋಗ್ಯ ಕಾಣಿಸಿಕೊಂಡರೆ ತಕ್ಷಣವೇ ವೈದ್ಯರ ಸಲಹೆ ಪಡೆಯಿರಿ
  • ಜಾತ್ರೆ, ಉತ್ಸವ, ಸಭೆ, ಸಮಾರಂಭಗಳಿಂದ ಸಾಧ್ಯವಾದಷ್ಟು ದೂರವಿರಿ
  • 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ

ಮೇನಲ್ಲಿ ಕೋವಿಡ್‌ ಉಲ್ಬಣ ಸಾಧ್ಯತೆ

ಮೇ ತಿಂಗಳ ಹೊತ್ತಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಕೇಸುಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಜನರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯದ ದಿನಗಳು ಬರುವ ಸಂಭವವಿದೆ ಎಂದು ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ