ಆ್ಯಪ್ನಗರ

ರಾಜ್ಯಾದ್ಯಂತ 25ಲಕ್ಷ ಸಸಿ ನೆಡುವ ಅಭಿಯಾನಕ್ಕೆ ಸಿಜೆ ಚಾಲನೆ

ವಿಶ್ವ ಪರಿಸರ ದಿನದ ಅಂಗವಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಂತ 25 ಲಕ್ಷ ಸಸಿಗಳನ್ನು ನೆಡುವ ಅಭಿಯಾನಕ್ಕೆ ...

Vijaya Karnataka 5 Jun 2019, 5:00 am
ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಂತ 25 ಲಕ್ಷ ಸಸಿಗಳನ್ನು ನೆಡುವ ಅಭಿಯಾನಕ್ಕೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಮಂಗಳವಾರ ಚಾಲನೆ ನೀಡಿದರು.
Vijaya Karnataka Web news/karnataka/plantetion
ರಾಜ್ಯಾದ್ಯಂತ 25ಲಕ್ಷ ಸಸಿ ನೆಡುವ ಅಭಿಯಾನಕ್ಕೆ ಸಿಜೆ ಚಾಲನೆ


ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಕಾನೂನು ಪ್ರಾಧಿಕಾರದ ಮೂಲಕ ಇಂದು(ಬುಧವಾರ) ಸಸಿಗಳನ್ನು ನಡೆಲಾಗುವುದು, ಅದಕ್ಕಾಗಿ ಜಿಲ್ಲಾಡಳಿತಗಳ ಜೊತೆ ಸ್ಥಳಗಳನ್ನು ಗುರುತಿಸಲಾಗಿದೆ.

ಹೈಕೋರ್ಟ್‌ ಮುಂಭಾಗದಲ್ಲಿ ಸ್ವತಃ ಗಿಡ ನೆಡುವ ಮೂಲಕ ಅವರು ಸಾಂಕೇತಿಕವಾಗಿ ಅಭಿಯಾನ ಉದ್ಘಾಟಿಸಿದರು. ಹೈಕೋರ್ಟ್‌ನ ಎಲ್ಲ ನ್ಯಾಯಮೂರ್ತಿಗಳೂ ಸಹ ಸಸಿ ನೆಟ್ಟು ಅಭಿಯಾನ ಯಶಸ್ವಿಯಾಗಲೆಂದು ಆಶಿಸಿದರು.

''ಉತ್ತಮ ಪರಿಸರವಿಲ್ಲದೆ ಮಾನವನ ಇರುವಿಕೆಗೆ ಮೌಲ್ಯವಿಲ್ಲ. ಪ್ರತಿಯೊಬ್ಬರೂ ಸಹ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಯ್ದುಕೊಳ್ಳಲು ಆಸಕ್ತಿ ತೋರಬೇಕು. ನಮ್ಮ ಭವಿಷ್ಯದ ಜೀವನಕ್ಕಾಗಿ ಹಾಗೂ ಮುಂದಿನ ತಲೆಮಾರಿಗಾಗಿ ಪರಿಸರ ಸಂರಕ್ಷಣೆ ಮಾಡುವುದು ಇಂದು ತುರ್ತ ಅವಶ್ಯಕತೆ ಇದೆ''ಎಂದು ಸಿಜೆ ತಿಳಿಸಿದ್ದಾರೆ.

ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹೈಕೋರ್ಟ್‌ನ ಹಿರಿಯ ನ್ಯಾ. ಎಲ್‌. ನಾರಾಯಣಸ್ವಾಮಿ ''ಪರಿಸರದ ಬಗ್ಗೆ ಹಾಗೂ ಅದಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಆಗ ಮಾತ್ರ ಈ ಅಭಿಯಾನ ಹಮ್ಮಿಕೊಂಡಿರುವುದು ಸಾರ್ಥಕವಾಗುತ್ತದೆ''ಎಂದು ಹೇಳಿದ್ದಾರೆ.

ನ್ಯಾ.ರವಿ ಮಳೀಮಠ್‌, ''ನಮ್ಮ ಸುತ್ತಮತ್ತಲಿನ ಪರಿಸರ ಆರೋಗ್ಯಕರವಾಗಿದ್ದರೆ ನಾವು ಆರೋಗ್ಯಕರವಾಗಿರುತ್ತೇವೆ. ಪರಿಸರಕ್ಕೆ ಹಾನಿ ಮಾಡಿದರೆ ನಮಗೆ ನಾವೇ ಹಾನಿ ಮಾಡಿಕೊಂಡಂತೆ, ನಮ್ಮ ತಪ್ಪುಗಳಿಂದ ನಾವು ಪಾಠ ಕಲಿಯದಿದ್ದರೆ ನಿಸರ್ಗವೇ ಪಾಠ ಕಲಿಸುವ ಸ್ಥಿತಿ ನಿರ್ಮಾಣವಾಗುತ್ತದೆ. ಅದಕ್ಕೆ ಅವಕಾಶ ನೀಡಬಾರದು,'' ಎಂದರು. ಹಿರಿಯ ನ್ಯಾ.ಬಿ.ವಿ. ನಾಗರತ್ನ ಸೇರಿದಂತೆ ಎಲ್ಲ ನ್ಯಾಯಮೂರ್ತಿಗಳು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್‌ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ