ಆ್ಯಪ್ನಗರ

ಇಂದು ಪ್ರಧಾನಿ- ಸಿಎಂ ಭೇಟಿ

ಮುಖ್ಯಮಂತ್ರಿ ಎಚ್‌ಡಿ...

Vijaya Karnataka 27 Dec 2018, 5:00 am
ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಗುರುವಾರ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ.
Vijaya Karnataka Web 1906-2-2-06 (2)


ಸಂಜೆ 5 ಗಂಟೆಗೆ ನವದಿಲ್ಲಿಯಲ್ಲಿ ಪ್ರಧಾನಿ ಅವರನ್ನು ಭೇಟಿ ಮಾಡಲಿರುವ ಸಿಎಂ, ಬರ ನಿರ್ವಹಣೆಗೆ ಹೆಚ್ಚಿನ ನೆರವು ನೀಡುವಂತೆ ಕೋರಲಿದ್ದಾರೆ. ಅಲ್ಲದೆ, ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆಯೂ ಮನವಿ ಮಾಡಲಿದ್ದಾರೆ.

ಇದಕ್ಕೂ ಮುನ್ನ ಹಣಕಾಸು ಸಚಿವ ಅರುಣ್‌ ಜೇಟ್ಲಿ, ರೈಲ್ವೆ ಹಾಗೂ ಕಲ್ಲಿದ್ದಲು ಸಚಿವ ಪಿಯೂಷ್‌ ಗೋಯಲ್‌, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್‌ ಪ್ರಭು ಅವರನ್ನೂ ಸಿಎಂ ಭೇಟಿ ಮಾಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ