ಆ್ಯಪ್ನಗರ

ರೈತರ ಸಾಲಮನ್ನಾ ಬಗ್ಗೆ ತಪ್ಪು ಮಾಹಿತಿ ನೀಡುತ್ತಿರುವ ಪಿಎಂ ಮೋದಿ: ಕುಮಾರಸ್ವಾಮಿ ಆರೋಪ

ಕಿಸಾನ್‌ ಸಮ್ಮಾನ್‌ ಯೋಜನೆಯಿಂದ ರಾಜ್ಯದ ಕೇವಲ 6 ರೈತರಿಗೆ ತಲಾ 2,000 ರೂ. ಕೊಡಲಾಗಿದೆ. ರೈತರ ಬಗ್ಗೆ ನಿಮಗಿರುವ ಕಾಳಜಿ ಬಗ್ಗೆ ಇದಕ್ಕಿಂತ ಹೆಚ್ಚಿನ ಮಾಹಿತಿಯನ್ನು ನಾನು ಕೇಳುವುದಿಲ್ಲ. - ಎಚ್‌ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ

Vijaya Karnataka Web 27 Mar 2019, 10:27 am
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ರಾಜ್ಯ ಸರಕಾರದ ರೈತರ ಸಾಲಮನ್ನಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತ ರಾಷ್ಟ್ರದ ಜನತೆಯ ಹಾದಿ ತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
Vijaya Karnataka Web H D Kumaraswamy


ಸರಣಿ ಟ್ವೀಟ್‌ ಮಾಡಿರುವ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಮೈತ್ರಿ ಸರಕಾರ ಇದುವರೆಗೆ 6,223.48 ಕೋಟಿ ರೂ. ಬಿಡುಗಡೆ ಮಾಡಿದೆ. ಇದು 15.58 ಲಕ್ಷ ರೈತರಿಗೆ ಸಹಾಯವಾಗಿದೆ ಎಂಬ ಮಾಹಿತಿ ನೀಡುವ ಮೂಲಕ ಬಿಜೆಪಿ ನಾಯಕರ ಕಣ್ತೆರೆಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದಿದ್ದಾರೆ.

ಈ ನಡುವೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯ ಕಾರ್ಯಗತಿ ಬಗ್ಗೆ ಟೀಕಿಸಿರುವ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಕೇವಲ 6 ರೈತರು ಕಿಸಾನ್‌ ಸಮ್ಮಾನ್‌ ಯೋಜನೆಯ ಲಾಭ ಪಡೆದಿದ್ದಾರೆ. ರಾಜ್ಯ ಸರಕಾರ ಈ ಯೋಜನೆಯಡಿ 9.9 ಲಕ್ಷ ಫಲಾನುಭವಿ ರೈತರ ಹೆಸರುಗಳನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ. ಆದರೆ ಕೇವಲ 6, ಈ ಸಂಖ್ಯೆಯನ್ನು ಒತ್ತಿ ಹೇಳಲು ಇಚ್ಛಿಸುತ್ತೇನೆ. ಈ ಆರು ರೈತರಿಗೆ ತಲಾ 2,000 ರೂ. ಕೊಡಲಾಗಿದೆ. ರೈತರ ಬಗ್ಗೆ ನಿಮಗಿರುವ ಕಾಳಜಿ ಬಗ್ಗೆ ಇದಕ್ಕಿಂತ ಹೆಚ್ಚಿನ ಮಾಹಿತಿಯನ್ನು ನಾನು ಕೇಳುವುದಿಲ್ಲ ಎಂದಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ