ಆ್ಯಪ್ನಗರ

ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ

ಸಕ್ರ್ಯೂಟ್‌ ಹೌಸ್‌ನಲ್ಲಿ ಸಕಲ ಸಿದ್ಧತೆ | ನಗರದೆಲ್ಲೆಡೆ ಕಟ್ಟೆಚ್ಚರ | ಎಸ್‌ಪಿಜಿ ಭೇಟಿ

Vijaya Karnataka 17 Dec 2017, 10:05 pm

ಮಂಗಳೂರು: ಸೋಮವಾರ ಲಕ್ಷ ದ್ವೀಪ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಡಿ.18ರಂದು ರಾತ್ರಿ 11 ಗಂಟೆ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ ಮಂಗಳೂರಿನ ಪ್ರವಾಸಿಮಂದಿರಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Vijaya Karnataka Web pm modi to stay in mangalore
ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ


ಇತ್ತೀಚೆಗೆ ಅಪ್ಪಳಿಸಿದ ಓಕಿ ಚಂಡಮಾರುತದಿಂದ ಹಾನಿಗೆ ಒಳಗಾದ ಕೇರಳ,ತಮಿಳುನಾಡು ಹಾಗೂ ಲಕ್ಷ ದ್ವೀಪ ಪ್ರದೇಶವನ್ನು ಪ್ರಧಾನಿ ಅವಲೋಕಿಸಲಿದ್ದಾರೆ. ಸೋಮವಾರ ರಾತ್ರಿ ಮಂಗಳೂರಿನಲ್ಲಿ ತಂಗಲಿರುವ ಅವರು, ಡಿ.19ರಂದು ಬೆಳಗ್ಗೆ 7.30ಕ್ಕೆ ವಿಶೇಷ ವಿಮಾನದ ಮೂಲಕ ಲಕ್ಷ ದ್ವೀಪದ ಅಗತಿ ದ್ವೀಪಕ್ಕೆ ತೆರಳಲಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ ನಗರದ ಸರ್ಕೀಟ್‌ ಹೌಸ್‌ನಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಎಸ್‌ಪಿಜಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಕಮಿಷನರ್‌ ಸೇರಿ ಹಿರಿಯ ಪೊಲೀಸ್‌ ಅಧಿಕಾರಿಗಳು ಇತರ ಭದ್ರತಾ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ. ಸಕ್ರ್ಯೂಟ್‌ ಹೌಸ್‌ ಜತೆಯಲ್ಲಿ ಪರ್ಯಾಯವಾಗಿ ನಗರದ ಒಂದು ಖಾಸಗಿ ಹೋಟೆಲ್‌ನಲ್ಲೂ ಪ್ರಧಾನಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಆಸ್ಪತ್ರೆ ವಾರ್ಡ್‌ ಮೀಸಲು: ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಒಂದು ವಾರ್ಡ್‌ ಅನ್ನು ಮೀಸಲಿಡಲಾಗಿದೆ. ತುರ್ತು ಸಂದರ್ಭದಲ್ಲಿ ಅಗತ್ಯವಿದ್ದರೆ ಮುಂಜಾಗ್ರತಾ ಕ್ರಮವಾಗಿ ಮೊದಲೇ ವಾರ್ಡ್‌ ನಿಗದಿಪಡಿಸಿ ಇಲ್ಲಿ ಸಕಲ ಚಿಕಿತ್ಸಾ ವ್ಯವಸ್ಥೆಯನ್ನು ಮಾಡಲಾಗಿದೆ. ಇಲ್ಲಿಗೂ ಭದ್ರತಾ ಸಿಬ್ಬಂದಿ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

ಹೆಲಿಕಾಪ್ಟರ್‌, ಕಾರು ಆಗಮನ: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಬೇಕಾಗಿರುವುದರಿಂದ ವಾಯುಪಡೆ ಹೆಲಿಕಾಪ್ಟರ್‌ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದಲ್ಲದೆ ಪ್ರಧಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಗರದ ಸಕ್ರ್ಯೂಟ್‌ ಹೌಸ್‌ಗೆ ಸಂಚರಿಸಲು ಪ್ರಧಾನಿಗೆ ಮೀಸಲಿರುವ ಕಾರನ್ನು ಭಾನುವಾರ ಮಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ. ಎರಡು ಕಾರು ಬಂದಿದ್ದು, ಸದ್ಯ ಈ ಕಾರುಗಳನ್ನು ವಿಮಾನ ನಿಲ್ದಾಣ ಆವರಣದಲ್ಲಿ ಪಾರ್ಕ್‌ ಮಾಡಲಾಗಿದೆ.

ಸರ್ಕೀಟ್‌ ಹೌಸ್‌ ಕ್ಲೀನ್‌:

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ ಸರ್ಕೀಟ್‌ ಹೌಸ್‌ ಹೌಸ್‌ನಲ್ಲಿ ಭಾನುವಾರ ಬೆಳಗ್ಗಿನಿಂದ ಶುಚಿತ್ವ ಕಾರ್ಯಕ್ರಮ ನಡೆಯುತ್ತಿದೆ. ಕಳೆದ ತಿಂಗಳಷ್ಟೇ ಧರ್ಮಸ್ಥಳ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಿದ್ದರು. ಒಟ್ಟಾರೆಯಾಗಿ ಪ್ರಧಾನಿ ಮೋದಿ ಅವರದ್ದು ಮೂರನೇ ಮಂಗಳೂರು ಭೇಟಿ ಇದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಕೇವಲ ವಾಸ್ತವ್ಯಕ್ಕಾಗಿ ಮಾತ್ರ ಭೇಟಿ ನೀಡುತ್ತಿದ್ದಾರೆ. ಉಳಿದಂತೆ ಈ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮ ಇಲ್ಲ.

ಪ್ರಧಾನಿ ಆಗಮನ, ನಿರ್ಗಮನ, ವಾಸ್ತವ್ಯ, ಭದ್ರತಾ ವ್ಯವಸ್ಥೆ, ಸಂಚಾರ ವ್ಯವಸ್ಥೆ ಮುಂತಾದ ಯಾವುದೇ ವಿಷಯಗಳನ್ನು ಮಾಧ್ಯಮಗಳ ಜತೆ ಹಂಚಿಕೊಳ್ಳಬಾರದು ಎಂಬ ಸಂದೇಶ ಕೇಂದ್ರ ಸರಕಾರದಿಂದ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಬಗ್ಗೆ ಯಾವುದೇ ವಿಚಾರ ಹಂಚಿಕೊಳ್ಳಲು ಪೊಲೀಸ್‌ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ. ಗುಜರಾತ್‌ ಚುನಾವಣೆ ಫಲಿತಾಂಶದ ದಿನದಂದೇ ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿರುವುದು ಬಿಜೆಪಿ ಪಾಳಯದಲ್ಲೂ ಹೊಸ ಸಂಚಲನ ಸೃಷ್ಟಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ