ಆ್ಯಪ್ನಗರ

ಪೊಲಿಟಿಕಲ್‌ ‘ಮನ್‌ ಕಿ ಬಾತ್‌’ಗೆ ಭಾರಿ ಸಿದ್ಧತೆ: ನಾಳೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತು

ಪ್ರಧಾನಿ ನರೇಂದ್ರ ಮೋದಿ ತಮ್ಮ ‘ಮನ್‌ ಕಿ ಬಾತ್‌’ ಕಾರ್ಯಕ್ರಮವನ್ನು ರಾಜಕೀಯ ಭಾಷಣಕ್ಕೆ ಮೀಸಲಿಡಲಿದ್ದು, ಫೆ. 24ರಂದು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಸಾವಿರ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Vijaya Karnataka 23 Feb 2019, 5:06 pm
ಬೆಂಗಳೂರು: ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ‘ಮನ್‌ ಕಿ ಬಾತ್‌’ ಕಾರ್ಯಕ್ರಮವನ್ನು ರಾಜಕೀಯ ಭಾಷಣಕ್ಕೆ ಮೀಸಲಿಡಲಿದ್ದು, ಫೆ. 24ರಂದು ದೇಶಾದ್ಯಂತ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಈ ಹಿನ್ನೆಲೆ ರಾಜ್ಯದಲ್ಲೂ ಭಾರಿ ಸಿದ್ಧತೆ ಆರಂಭವಾಗಿದೆ.
Vijaya Karnataka Web modi kashmir


ಎಲ್ಲ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲೂ ನಿಗದಿತ ಸ್ಥಳದಲ್ಲಿ ಕಾರ್ಯಕರ್ತರನ್ನು ಒಂದೆಡೆ ಸೇರಿಸಲು ಸೂಚಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮುಖಂಡರಿಗೆ ನೀಡಿರುವ ಪ್ರಮುಖ ಅಸೈನ್ಮೆಂಟ್‌ಗಳಲ್ಲಿ ಇದೂ ಸೇರಿದೆ. ಈ ಬಾರಿ ಮೋದಿ ತಮ್ಮ ರಾಜಕೀಯ ಮುಂದೋರಣೆಯನ್ನು ಅನಾವರಣ ಮಾಡಲಿದ್ದಾರೆ. ಹೀಗಾಗಿ ಫೆಬ್ರವರಿ 24ರ ಮನ್‌ ಕಿ ಬಾತ್‌ಗೆ ವಿಶೇಷ ಮಹತ್ವ ಲಭಿಸಿದೆ.

ಇನ್ನು, ರಾಜಧಾನಿ ಬೆಂಗಳೂರಿನಲ್ಲೂ ಈ ಬಗ್ಗೆ ಸಿದ್ಧತೆ ಬರದಿಂದ ನಡೆದಿದೆ. ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಸಾವಿರ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸೆಂಟ್ರಲ್‌ ಕಾಲೇಜಿನ ಜ್ಞಾನಭಾರತಿ ಸಭಾಂಗಣದಲ್ಲಿ ಇದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಧಾನಿ ಭಾಷಣದ ಬಳಿಕ ಅದರ ಕನ್ನಡಾನುವಾದ ಭಾಷಣವೂ ಸಹ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ