ಆ್ಯಪ್ನಗರ

ಠಾಣೆಯಲ್ಲಿ ಬಾಂಬೇ ಕಟ್ ಥಳಿತ, ತನಿಖೆಯಾಗಲಿ ಎಂದ ಪರಮೇಶ್ವರ್

ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆಯಲ್ಲಿ ಆರೋಪಿಯೊಬ್ಬನಿಗೆ ಪೊಲೀಸರು ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆಗೆ ಮಾಜಿ ಡಿಸಿಎಂ ಡಾ. ಪರಮೇಶ್ವರ್ ಖಂಡನೆ ವ್ಯಕ್ತಪಡಿಸಿದ್ದು ತನಿಖೆಗೆ ಒತ್ತಾಯಿಸಿದ್ದಾರೆ.

Vijaya Karnataka Web 13 Sep 2019, 9:59 pm
ಬೆಂಗಳೂರು: ಆರೋಪಿಯೊಬ್ಬನಿಗೆ ಪೊಲೀಸ್‌ ಠಾಣೆಯಲ್ಲಿ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿರುವ ಪ್ರಕರಣದ ತನಿಖೆಗೆ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಒತ್ತಾಯಿಸಿದ್ದಾರೆ.
Vijaya Karnataka Web g parameshwar


ಯುವತಿಯರಿಗೆ ಚುಡಾಯಿಸಿದ ಆರೋಪಡಿಯಲ್ಲಿ ಯುವಕನೊಬ್ಬನಿಗೆ ಬೆಂಗಳೂರಿನ ಸುಬ್ರಹ್ಮಣ್ಯ ಠಾಣೆಯಲ್ಲಿ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಲಾಗಿತ್ತು. ಪೊಲೀಸ್ ಅಧಿಕಾರಿಗಳು ಯುವಕನ ಕಾಲನ್ನು ಮೇಲೆತ್ತಿ ಲಾಠಿಯಲ್ಲಿ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರ ಈ ವರ್ತನೆ ಅಮಾನವೀಯ ಎಂದು ವ್ಯಾಪಕವಾದ ಖಂಡನೆಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದವು.

ಇದೀಗ ಈ ಕುರಿತಾಗಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಈ ರೀತಿಯ ಶಿಕ್ಷೆ ನೀಡುವ ಮೂಲಕ ಪೊಲೀಸ್‌ ಇಲಾಖೆ ಬಗ್ಗೆಯೇ ಜನರಲ್ಲಿ ಭೀತಿ ಉಂಟು ಮಾಡುವಂತೆ ನಡೆದುಕೊಂಡಿದ್ದಾರೆ. ಈ ಬಗ್ಗೆ ಗೃಹ ಸಚಿವರು ಗಮನ ಹರಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.



ಪೊಲೀಸ್‌ ಇಲಾಖೆಯನ್ನು ಜನಸ್ನೇಹಿ ಮಾಡಬೇಕೆಂದು ಹಿಂದಿನ ನಮ್ಮ ಸರಕಾರ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಆದರೆ ಇದೀಗ ಬಿಜೆಪಿ ಸರಕಾರದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರು ಪೊಲೀಸ್‌ ಠಾಣೆಯಲ್ಲೇ ಆರೋಪಿಯೊಬ್ಬರನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಪೊಲೀಸರಿಗೆ ಆರೋಪಿಯನ್ನು ಬಂಧಿಸುವ ಅಧಿಕಾರವಿದೆ. ಸತ್ಯ ಹೇಳುವಂತೆ ಮಾಡಲು ಇತರೆ ಮಾರ್ಗ ಅನುಸರಿಸಬೇಕೇ ಹೊರತು ಈ ರೀತಿಯಾದ ಶಿಕ್ಷೆ ಖಂಡನಾರ್ಹ ಎಂದಿದ್ದಾರೆ.


ಈಗಾಗಲೇ ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಕಂಠೇಗೌಡ ಎಂಬುವವರನ್ಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ