ಆ್ಯಪ್ನಗರ

ಪೋಲಿಯೊ ಲಸಿಕೆ ಅಭಿಯಾನದಲ್ಲಿ ಗೈರಾದ ನಾಲ್ವರು ವೈದ್ಯಾಧಿಕಾರಿಗಳ ಅಮಾನತು

ರಾಷ್ಟ್ರೀಯ ಪೋಲಿಯೊ ಲಸಿಕಾ ಅಭಿಯಾನದ ಸಂದರ್ಭದಲ್ಲಿ ಕರ್ತವ್ಯಕ್ಕೆ ಹಾಜರಾಗದೆ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯಾದಗಿರಿಯ ನಾಲ್ಕು ಮಂದಿ ಸರಕಾರಿ ವೈದ್ಯಾಧಿಕಾರಿಗಳನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

Vijaya Karnataka 30 Mar 2019, 5:00 am
ಬೆಂಗಳೂರು : ರಾಷ್ಟ್ರೀಯ ಪೋಲಿಯೊ ಲಸಿಕಾ ಅಭಿಯಾನದ ಸಂದರ್ಭದಲ್ಲಿ ಕರ್ತವ್ಯಕ್ಕೆ ಹಾಜರಾಗದೆ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯಾದಗಿರಿಯ ನಾಲ್ಕು ಮಂದಿ ಸರಕಾರಿ ವೈದ್ಯಾಧಿಕಾರಿಗಳನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
Vijaya Karnataka Web polio campaign absentees suspend
ಪೋಲಿಯೊ ಲಸಿಕೆ ಅಭಿಯಾನದಲ್ಲಿ ಗೈರಾದ ನಾಲ್ವರು ವೈದ್ಯಾಧಿಕಾರಿಗಳ ಅಮಾನತು


ಮಾರ್ಚ್‌ 10ರಂದು ಲಸಿಕಾ ಅಭಿಯಾನದ ಬಗ್ಗೆ ಯಾದಗಿರಿಯ ಖಾಸಗಿ ಆಸ್ಪತ್ರೆಗಳ ಪರಿಶೀಲನೆ ನಡೆಸಿದ ವೇಳೆ ರಾಜ್ಯ ನೋಡಲ್‌ ಅಧಿಕಾರಿಗಳು ಹಾಗೂ ಜಿಲ್ಲಾ ಆರ್‌ಸಿಎಚ್‌ ಅಧಿಕಾರಿಗಳಿಗೆ ಸರಕಾರಿ ವೈದ್ಯರು ಕೆಲಸ ಮಾಡುತ್ತಿದ್ದದ್ದು ಕಣ್ಣಿಗೆ ಬಿದ್ದಿದೆ.

ಇದರಲ್ಲಿ ಯಾದಗಿರಿ ತಾಲೂಕು ಹೊನಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮುದಷೀರ್‌ ಅಹ್ಮದ್‌ ಸಾಜೀದ್‌ ಕೇಂದ್ರ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸದೆ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಜತೆಗೆ ವೈದ್ಯಕೀಯ ಚಿಕಿತ್ಸೆ ನೀಡಲು ಬಳಸಿದ ಉಪಕರಣಗಳೂ ಸರಕಾರದ್ದು ಎಂಬುದು ತಿಳಿದು ಬಂದಿದೆ. ಜತೆಗೆ ಯಾದಗಿರಿಯ ಗಾಜರಕೋಟ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿಜಯಕುಮಾರ್‌ ಪಾಟೀಲ್‌, ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಕೆ. ನಾಗಣ್ಣ ಕೆ. ಮುದ್ನಾಳ, ಯಾದಗಿರಿ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ಪ್ರಕಾಶ್‌ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆಂಬುದು ವಿಚಾರಣೆಯಲ್ಲಿ ಗೊತ್ತಾಗಿದೆ ಹೀಗಾಗಿ ಈ ನಾಲ್ವರು ವೈದ್ಯಾಧಿಕಾರಿಗಳನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ