ಆ್ಯಪ್ನಗರ

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಸುಧಾಕರ್‌ ನೇಮಕ ಪ್ರಶ್ನಿಸಿ ಪಿಐಎಲ್‌

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ರನ್ನಾಗಿ ಶಾಸಕ ಕೆ...

Vijaya Karnataka 27 Jun 2019, 5:00 am
ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ರನ್ನಾಗಿ ಶಾಸಕ ಕೆ.ಸುಧಾಕರ್‌ ಅವರನ್ನು ನೇಮಕ ಮಾಡಿರುವ ಸರಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಲಾಗಿದೆ.
Vijaya Karnataka Web DRKSUDAKAR congress chikkaballapura


ಚಿಕ್ಕಬಳ್ಳಾಪುರದವರೇ ಆದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್‌.ಆಂಜನೇಯ ರೆಡ್ಡಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅದು ಮುಂದಿನ ವಾರ ಸಿಜೆ ಎ.ಎಸ್‌. ಓಕ್‌ ಪೀಠದ ಮುಂದೆ ವಿಚಾರಣೆಗೆ ಬರುವ ನಿರೀಕ್ಷೆ ಇದೆ.

''ಸುಧಾಕರ್‌ ನೇಮಕ ರಾಜಕೀಯ ಪ್ರೇರಿತ. ಸುಧಾಕರ್‌ ನೇಮಕದಲ್ಲಿ ಜಲ, ವಾಯು, ಪರಿಸರ ಕಾಯಿದೆ ಹಾಗೂ ಅರಣ್ಯ ಮತ್ತು ಪರಿಸರದ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸುಪ್ರೀಂ ತೀರ್ಪಿನಂತೆ ಪರಿಸರ ತಜ್ಞರನ್ನು ಮಂಡಳಿಗೆ ನೇಮಕ ಮಾಡಬೇಕು. ಆದರೆ ಪರಿಸರ ಬಗ್ಗೆ ಏನೂ ತಿಳಿದಿಲ್ಲದ ಶಾಸಕರನ್ನು ನೇಮಕ ಮಾಡುವ ಮೂಲಕ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘಿಸಿದೆ'' ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ