ಆ್ಯಪ್ನಗರ

Janardhana Reddy Bail Plea: ಜೈಲೋ? ಬೇಲೋ? ತೀರ್ಪು ಇಂದು

ಬಹುಕೋಟಿ ರೂಪಾಯಿ ವಂಚನ, ಚಿನ್ನದ ಗಟ್ಟಿ ಖರೀದಿ ಆರೋಪ

Vijaya Karnataka Web 14 Nov 2018, 11:22 am
ಬೆಂಗಳೂರು: ಆ್ಯಂಬಿಡೆಂಟ್‌ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟವಾಗುವ ನಿರೀಕ್ಷೆ ಇದೆ.
Vijaya Karnataka Web ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ


ಸಿಸಿಬಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಜನಾರ್ದನ ರೆಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಈಗಾಗಲೇ ಪೂರ್ಣಗೊಂಡಿದೆ. ತೀರ್ಪು ಕಾಯ್ದಿರಿಸಲಾಗಿದೆ.

ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರು ಸಿಸಿಬಿ ಅಧಿಕಾರಿಗಳಿಗೆ ಪ್ರಶ್ನೆಗಳ ಸುರಿಮಳೆಗರೆದರು.

ರೆಡ್ಡಿ ವಿರುದ್ಧ ಆರೋಪಗಳಿಗೆ ಸಾಕ್ಷ್ಯಗಳು ಸ್ಪಷ್ಟವಾಗಿಲ್ಲ ಎಂದು ವಿಚಾರಣೆ ವೇಳೆ ಗಮನಕ್ಕೆ ತರಲಾಗಿದೆ.

ಆದರೆ ತನಿಖೆ ವೇಳೆ ಕೆಲವು ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ಸಿಸಿಬಿ ಪರ ವಕೀಲರು ವಾದ ಮಂಡಿಸಿದ್ದಾರೆ.

ರೆಡ್ಡಿ ಆಪ್ತ ಭಾಗಿಯಾಗಿದ್ದಾರೆ ಎನ್ನಲಾದ ಕೆಲವು ಲೇವಾದೇವಿ, ಹಣಕಾಸು ವಹಿವಾಟುಗಳಲ್ಲಿ ಇವರ ಪಾತ್ರದ ಬಗ್ಗೆ ತನಿಖೆಯಲ್ಲಿ ಮಾಹಿತಿ ದೊರೆತಿದೆ ಎಂದು ಸಿಸಿಬಿ ಅಧಿಕಾರಿಗಳು ಹೇಳಿದ್ದಾರೆ. ಇದು ಜನಾರ್ದನ ರೆಡ್ಡಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಬಹುದು ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ