ಆ್ಯಪ್ನಗರ

ರೈತರ ವಿರೋಧದ ನಡುವೆಯೂ ಶುಕ್ರವಾರ ವಿಧಾನಸಭೆಯಲ್ಲಿ ವಿವಾದಾತ್ಮಕ ಮಸೂದೆಗಳ‌‌ ಅಂಗೀಕಾರ ಸಾಧ್ಯತೆ

ರೈತರ ದಲಿತ,‌ಕಾರ್ಮಿಕ ಸಂಘಟನೆಗಳ ವಿರೋಧದ ನಡುವೆಯೂ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆ ಹೆಚ್ಚಿದೆ.

Written byಇರ್ಷಾದ್ ಉಪ್ಪಿನಂಗಡಿ | Vijaya Karnataka Web 25 Sep 2020, 8:17 am
Vijaya Karnataka Web karnataka assembly

ಬೆಂಗಳೂರು: ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆಗಳು ಶುಕ್ರವಾರ ವಿಧಾನಸಭೆಯಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆ ಇದೆ.

ಈ‌ ಎರಡು ವಿವಾದಾತ್ಮಕ ಮಸೂದೆಗಳನ್ನು ವಿರೋಧಿಸಿ ರಾಜ್ಯಾದ್ಯಂತ ರೈತ, ದಲಿತ,‌ಕಾರ್ಮಿಕ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಲಿವೆ. ಯಾವುದೇ ಕಾರಣಕ್ಕೂ‌ ಸುಗ್ರೀವಾಜ್ಞೆಗಳನ್ನು ಅಂಗೀಕರಿಸದಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು‌‌ ರೈತ ಸಂಘಟನೆಗಳು ಹಮ್ಮಿಕೊಂಡಿವೆ.‌

ರೈತ ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಯಾವುದೇ ಕಾರಣಕ್ಕೂ ಈ ಸುಗ್ರಿವಾಜ್ಞೆ ಗಳನ್ನು ಅಂಗೀಕರಿಸದಂತೆ ಒತ್ತಾಯಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಸ್ಥಳದಲ್ಲಿ ಬೆಳಗ್ಗೆ 10-30 ಗಂಟೆಗೆ ರಸ್ತೆ ತಡೆ ನಡೆಸಲಿದೆ.

ರೈತ ಸಂಘಟನೆಗಳಿಂದ ರಾಜ್ಯಾದ್ಯಂತ ಪ್ರತಿಭಟನೆ: ಎಲ್ಲೆಲ್ಲಿ ಏನೇನಾಗುತ್ತಿದೆ?

ಅಲ್ಲದೆ, ರಾಜ್ಯಾದ್ಯಂತ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಬಂಧನಕ್ಕೆ ಒಳಗಾಗಲು ಐಕ್ಯ ಹೋರಾಟದ ಸಂಘಟನೆಗಳು ಕರೆ ನೀಡಿವೆ. ಜೊತೆಗೆ ಸೆ. 28 ರಂದು ಕರ್ನಾಟಕ ಬಂದ್ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ.

ಸೋಂಕಿತರಿಗೆ ಹಾಸಿಗೆ ಕಾಯ್ದಿರಿಸದೆ ನಿಯಮ ಉಲ್ಲಂಘನೆ, ಬೆಂಗಳೂರಿನ ಪ್ರತಿಷ್ಠಿತ 4 ಆಸ್ಪತ್ರೆಗಳ ವಿರುದ್ಧ ಎಫ್‌ಐಆರ್‌

ಸದನದಲ್ಲಿ ಗದ್ದಲ ಸಾಧ್ಯತೆ
ವಿರೋಧದ ನಡುವೆಯೂ ಈ ಎರಡು‌ ಸುಗ್ರೀವಾಜ್ಞೆಗಳಿಗೆ ಅಂಗೀಕಾರ ಪಡೆಯಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ‌ವಿಧಾನಸಭೆಯಲ್ಲಿ ಶುಕ್ರವಾರ ಗದ್ದಲ ಉಂಟಾಗಲಿದೆ. ಕಾಂಗ್ರೆಸ್ ಈಗಾಗಲೇ ‌ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ. ಈ ಕುರಿತಾದ ಪ್ರಸ್ತಾವನೆಯಲ್ಲಿ ಚರ್ಚೆ ನಡೆಸಲು ಸ್ಪೀಕರ್ ಅನುಮತಿ ನೀಡಿದರೆ ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಸಜ್ಜಾಗಿದೆ.

ತರು ಬರ್ತಾರೆ ದಾರಿ ಬಿಡಿ..! ಶುಕ್ರವಾರ ಬೆಂಗಳೂರು ನಗರ, ಸುತ್ತಲಿನ ಹೆದ್ದಾರಿಗಳು ಬಂದ್..!

ಅಲ್ಲದೆ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆಗಳ ಅಂಗೀಕಾರಕ್ಕೆ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಮುಂದಾಗಿದೆ. ಪರಿಣಾಮ ಸದನದಲ್ಲಿ ಶುಕ್ರವಾರ ಕೋಲಾಹಲ‌ ಉಂಟಾಗಲಿದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ