ಆ್ಯಪ್ನಗರ

ಕೈಗಾರಿಕೆಗೆ ನಿರಂತರ ವಿದ್ಯುತ್‌ ಪೂರೈಕೆ

ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ...

Vijaya Karnataka 6 Apr 2018, 5:00 am
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಕೈಗಾರಿಕೆಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗೆ ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೈಗಾರಿಕೋದ್ಯಮಿಗಳಿಗೆ ಅಭಯ ನೀಡಿದ್ದಾರೆ.
Vijaya Karnataka Web 0504-2-2-30


ನಗರದ ಕಾಸಿಯಾ ಸಭಾಂಗಣದಲ್ಲಿ ಆಯೋಜಿಸಿದ್ದ ಉದ್ಯಮಿಗಳೊಂದಿಗೆ ಸಂವಾದದಲ್ಲಿ ಗುರುವಾರ ಮಾತನಾಡಿ ''ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಿದ ಬಳಿಕ ಸಣ್ಣ ಕೈಗಾರಿಕೆಗಧಿಳಿಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ರಾಜ್ಯದಲ್ಲೂ ಕೈಗಾರಿಕೆಧಿಗಧಿಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಲಾಗುವುದು,'' ಎಂದರು.

''ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಹೊಸ ಯೋಜನೆ ರೂಪಿಸಲಾಗುವುದು. ಕೈಗಾರಿಕೆ ಕ್ಷೇತ್ರ ಎದುರಿಸುವ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಲಾಗುವುದು,'' ಎಂದು ಯಡಿಯೂರಪ್ಪ ತಿಳಿಸಿದರು.

ಎಂಎಸ್‌ಎಂಇ ಕ್ಷೇತ್ರಕ್ಕೆ ಪ್ರೋತ್ಸಾಹ:

ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ''ಕೇಂದ್ರ ಬಜೆಟ್‌ ಮಂಡನೆ ಮುನ್ನ ಎಂಎಸ್‌ಎಂಇ ಕ್ಷೇತ್ರದ ಬೆಳವಣಿಗೆಗೆ ಪ್ರೋತ್ಸಾಹಿಸಲು ಪ್ರಧಾನಿಯವರನ್ನು ಕೋರಲಾಗಿತ್ತು. ರೇಷ್ಮೆ ವಲಯಕ್ಕೆ 2500 ಕೋಟಿ ರೂ. ನೆರವು ಒದಗಿಸುವ ಪ್ರಸ್ತಾಪಕ್ಕೆ ಸ್ಪಂದಿಸಿ 2,165 ಕೋಟಿ ರೂ. ಅನುದಾನ ನಿಗದಿ ಮಾಡಿದ್ದಾರೆ. ಇದಕ್ಕಾಗಿ ಪ್ರಧಾನಿಯವರನ್ನು ಅಭಿನಂದಿಸಲಾಗುವುದು,'' ಎಂದರು.

ಮಾಜಿ ಸಚಿವ ವಿ.ಸೋಮಣ್ಣ, ಬಿಜೆಪಿ ವಕ್ತಾರ ಎನ್‌.ವಾಮನ ಆಚಾರ್ಯ ಹಾಗೂ ಕಾಸಿಯಾ ಪದಾಧಿಕಾರಿಗಳು ಹಾಜರಿದ್ದರು.


''ಕೈಗಾರಿಕೆ ಸ್ನೇಹಿ ವಾತಾವರಣ ನಿರ್ಮಿಸಲು ಎಂಎಸ್‌ಎಂಇ ಕ್ಷೇತ್ರವನ್ನು ಪ್ರೋತ್ಸಾಹಿಸಬೇಕು. ಕೆಐಎಡಿಬಿ ವಸಾಹತುಗಳಲ್ಲಿ ಸಣ್ಣ ಕೈಗಾರಿಕೋದ್ಯಮಿಗಳಿಗೆ ಆದ್ಯತೆ, ಕೈಗಾರಿಕೆ ಟೌನ್‌ಶಿಪ್‌, ಸಾಲಸೌಲಭ್ಯ ಒದಗಿಸಬೇಕು''.

- ಆರ್‌.ಹನುಮಂತೇಗೌಡ, ಕಾಸಿಯಾ ಅಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ