ಆ್ಯಪ್ನಗರ

Prashanth Sambargi : ದೇವೇಗೌಡರನ್ನು ಕಳ್ಳ ಎಂದ ಪ್ರಶಾಂತ್‌ ಸಂಬರಗಿ; ಜೆಡಿಎಸ್‌ನಿಂದ ಪೊಲೀಸ್‌ ದೂರು ದಾಖಲು

Prashanth Sambargi : ರಾಹುಲ್‌ ಗಾಂಧಿಗೆ ಜೈಲು ಶಿಕ್ಷೆಯಾಗಿರುವ ಪ್ರಕರಣವನ್ನು ಉದಾಹರಣೆ ನೀಡಲು ದೇವೇಗೌಡ ಮತ್ತು ಅವರ ಕುಟುಂಬವನ್ನು ಬಳಸಿ ನಟ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಟ್ವೀಟ್‌ ಮಾಡಿದ್ದರು. ಸದ್ಯ ಎಚ್ಚೆತ್ತುಕೊಂಡು ಕ್ಷಮೆ ಕೇಳಿದ್ದಾರೆ.

Authored by ಜಯಪ್ರಕಾಶ್‌ ಬಿರಾದಾರ್‌ | Vijaya Karnataka Web 25 Mar 2023, 8:06 pm

ಹೈಲೈಟ್ಸ್‌:

  • ಮಾಜಿ ಪ್ರಧಾನಮಂತ್ರಿಗಳು ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡರ ಬಗ್ಗೆ ಟ್ವೀಟರ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು ಎಂದು ಪ್ರಶಾಂತ್‌ ಸಂಬರಗಿ ವಿರುದ್ಧ ದೂರು ದಾಖಲು.
  • ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಜೆಡಿಎಸ್‌ ಕಾರ್ಯಕರ್ತರು.
  • ಜೆಡಿಎಸ್‌ ನೀಡಿರುವ ದೂರಿನಲ್ಲಿ ಈ ಹಿಂದೆ ಸಂಬರಗಿ ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನ ಮಾಡಿರುವ ಹಲವು ಪ್ರಕರಣಗಳ ಉಲ್ಲೇಖ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಪ್ರಶಾಂತ್‌ ಸಂಬರಗಿ
ಪ್ರಶಾಂತ್‌ ಸಂಬರಗಿ
ಬೆಂಗಳೂರು: ಮಾಜಿ ಪ್ರಧಾನಮಂತ್ರಿಗಳು ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡರ ಬಗ್ಗೆ ಟ್ವೀಟರ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಮಾನಹಾನಿಗೆ ಯತ್ನಿಸಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ.
ಟ್ವಿಟ್ಟರ್ ಹಾಗೂ ಫೇಸ್‌ಬುಕ್ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷರಾದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿ ಹಲವರು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ. ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ. ದೂರು ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಭರವಸೆ ನೀಡಿದ್ದಾರೆ.


ಟ್ವೀಟ್‌ ಮಾಡಿದ್ದ ಸಂಬರಗಿ

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಹಿನ್ನಲೆಯಲ್ಲಿ ಅದರ ಬಗ್ಗೆ ವ್ಯಂಗ್ಯ ಮಾಡುವ ಬರದಲ್ಲಿ ಪ್ರಶಾಂತ್‌ ಸಂಬರಗಿ ದೇವೇಗೌಡರನ್ನು ಎಳೆದು ತಂದು ಅಪಮಾನ ಮಾಡಿದ್ದಾರೆ. “ಈ ಕೇಸ್ ಬಗ್ಗೆ ಸಿಂಪಲ್ ಆಗಿ ಹೇಳಬೇಕು ಎಂದರೆ, ದೇವೇಗೌಡ ಕಳ್ಳ ಅನ್ನೋದಕ್ಕೂ, ಗೌಡರು ಅನ್ನೋರೆಲ್ಲ ಕಳ್ಳರೇ ಯಾಕಿರುತ್ತಾರೆ ಅನ್ನೋದಕ್ಕೂ ವ್ಯತ್ಯಾಸ ಇದೆ. ಮೊದಲನೆಯದ್ದಕ್ಕೆ ದೇವೇಗೌಡರು ಕೇಸ್ ಹಾಕಬೇಕು, ಎರಡನೆಯದ್ದಕ್ಕೆ ಅವನ ಮಗನೋ ಮೊಮ್ಮಗನೋ ಅಥವಾ ಯಾರಾದರೂ ಗೌಡ ಕೇಸ್ ಹಾಕಬಹುದು. ಇದು ಸುಮ್ಮನೆ ಒಂದು ಉದಾಹರಣೆ ಕೊಟ್ಟೆ ಅಷ್ಟೆ, ಸೀರಿಯಸ್ ಆಗಿ ತಗೊಳಬೇಡಿ” ಎಂದು ಪ್ರಶಾಂತ್ ಸಂಬರ್ಗಿ ಟ್ವಿಟ್‌ ಮಾಡಿದ್ದರು.

Kendasampige: ‘ಭೈರತಿ ಕುಣಿಗಲ್’ ಆಗಿ ಎಂಟ್ರಿಕೊಟ್ಟ ‘ಬಿಗ್ ಬಾಸ್’ ಖ್ಯಾತಿಯ ಪ್ರಶಾಂತ್ ಸಂಬರಗಿ

ದೂರಿನಲ್ಲಿ ಹಿಂದಿನ ಪ್ರಕರಣಗಳ ಉಲ್ಲೇಖ

ಜೆಡಿಎಸ್‌ ನೀಡಿರುವ ದೂರಿನಲ್ಲಿ ಈ ಹಿಂದೆ ಸಂಬರಗಿ ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನ ಮಾಡಿರುವ ಹಲವು ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಮಾರ್ಚ್ 15ರಂದು "Elephant whisperers ಪೋಸ್ಟ್ ಮೇಲೆ ‘ಎಲ್ಲೇ ಕೂಸು ಹುಟ್ಟಲಿ ನಾನೇ ಅಪ್ಪ’ ಎಂದು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಮಾರ್ಚ್ 11ರಂದು ದೇವೇಗೌಡ ಅವರ ವಿರುದ್ಧ ‘ಇವರು ಹೊಟ್ಟೆಗೆ ಅನ್ನ ತಿಂತಾರ ಇಲ್ಲ ಏನು ತಿಂತಾರೆ?’ ಎಂದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಅಂತೆಯೇ ಮಾರ್ಚ್ 13ರಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಮಾಡಿದ ಸಾರ್ವಜನಿಕ ಭಾಷಣದ ಕ್ಲಿಪ್ ಬಳಿಸಿಕೊಂಡು ಪ್ರಶಾಂತ್ ಸಂಬರಗಿ ‘ಚೀ ಕಳ್ಳ ಕುಮಾರ್ ಸಾಬ್ ಖಾನ್’ ಎಂದು ಹೇಳಿ ಅವಮಾನಿಸಿದ್ದಾರೆ. ಈ ಎಲ್ಲಾವನ್ನು ಪರಿಗಣಿಸಿ ಕ್ರಮಕೈಗೊಳ್ಳುವಂತೆ ಜೆಡಿಎಸ್ ದೂರಿನಲ್ಲಿ ಉಲ್ಲೆಖಿಸಿದೆ.

ಕ್ಷಮೆ ಕೇಳಿದ ಸಂಬರಗಿ

ಜೆಡಿಎಸ್‌ನಿಂದ ದೂರು ದಾಖಲಾಗುತ್ತಲೇ ಎಚ್ಚೆತ್ತುಕೊಂಡ ಪ್ರಶಾಂತ್ ಸಂಬರ್ಗಿ ದೇವೇಗೌಡರ ಬಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, "ನನ್ನ ತಂದೆ ಸಮಾನರಾದ ದೇವೆಗೌಡ್ರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಾನು ಒಂದು ಉದಾರಣೆಯಾಗಿ ದೇವೆ ಗೌಡ ಎಂದು ಹೆಸರನ್ನು ಬಳಸಿದೆ ಹೊರತು ಯಾವುದೇ ದುರುದ್ವೇಷ ವಿರಲಿಲ್ಲ. ಇದು ಯಾವುದೇ ರೀತಿಯಲ್ಲೂ ಅವರ ಗೌರವಕ್ಕೆ ಚುತ್ತಿ ತರಲು ಬಳಸಲಿಲ್ಲ. ಇದರಿಂದ ಯಾರಿಗಾದರೂ ಅಸಮಾಧಾನವಾಗಿದ್ದರೆ ನನ್ನ ಕಳ ಕಳಿಯ ಕ್ಷಮೆ ವಿರಲಿ ” ಎಂದಿದ್ದಾರೆ.

ಲೇಖಕರ ಬಗ್ಗೆ
ಜಯಪ್ರಕಾಶ್‌ ಬಿರಾದಾರ್‌
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. ಚಿನ್ನದ ಪದಕದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಆರು ವರ್ಷಗಳಿಂದ ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ಆರೋಗ್ಯ, ಅರಣ್ಯ, ಸಾರಿಗೆ, ರಾಜಕೀಯ, ಕೊರೊನಾ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯದ ಕುರಿತು ಒಂದು ಸಾವಿರಕ್ಕೂ ಅಧಿಕ ವಿಶೇಷ ವರದಿಗಳನ್ನು ಬರೆದಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೊಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ