ಬೆಂಗಳೂರು: ಮಾಜಿ ಪ್ರಧಾನಮಂತ್ರಿಗಳು ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡರ ಬಗ್ಗೆ ಟ್ವೀಟರ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಮಾನಹಾನಿಗೆ ಯತ್ನಿಸಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ. ಟ್ವಿಟ್ಟರ್ ಹಾಗೂ ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷರಾದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿ ಹಲವರು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ. ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ. ದೂರು ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಭರವಸೆ ನೀಡಿದ್ದಾರೆ.
Prashanth Sambargi : ದೇವೇಗೌಡರನ್ನು ಕಳ್ಳ ಎಂದ ಪ್ರಶಾಂತ್ ಸಂಬರಗಿ; ಜೆಡಿಎಸ್ನಿಂದ ಪೊಲೀಸ್ ದೂರು ದಾಖಲು
Prashanth Sambargi : ರಾಹುಲ್ ಗಾಂಧಿಗೆ ಜೈಲು ಶಿಕ್ಷೆಯಾಗಿರುವ ಪ್ರಕರಣವನ್ನು ಉದಾಹರಣೆ ನೀಡಲು ದೇವೇಗೌಡ ಮತ್ತು ಅವರ ಕುಟುಂಬವನ್ನು ಬಳಸಿ ನಟ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿದ್ದರು. ಸದ್ಯ ಎಚ್ಚೆತ್ತುಕೊಂಡು ಕ್ಷಮೆ ಕೇಳಿದ್ದಾರೆ.
ಹೈಲೈಟ್ಸ್:
- ಮಾಜಿ ಪ್ರಧಾನಮಂತ್ರಿಗಳು ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡರ ಬಗ್ಗೆ ಟ್ವೀಟರ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು ಎಂದು ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು.
- ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಜೆಡಿಎಸ್ ಕಾರ್ಯಕರ್ತರು.
- ಜೆಡಿಎಸ್ ನೀಡಿರುವ ದೂರಿನಲ್ಲಿ ಈ ಹಿಂದೆ ಸಂಬರಗಿ ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನ ಮಾಡಿರುವ ಹಲವು ಪ್ರಕರಣಗಳ ಉಲ್ಲೇಖ.