ಜೂನ್ 6 ರಂದು ಮಳೆಗಾಗಿ ಜಪ: ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸರಕಾರ ಆದೇಶ
ರಾಜ್ಯದಲ್ಲಿ ಸಕಾಲದಲ್ಲಿ ಮಳೆಗಾಗಿ ಮುಜರಾಯಿ ದೇವಾಲಯಗಳಲ್ಲಿ ಜೂನ್ 6 ರಂದು ಪರ್ಜನ್ಯ ಜಪ ಹಾಗೂ ವಿಶೇಷ ಪೂಜೆಗಳನ್ನು ನಡೆಸುವಂತೆ ರಾಜ್ಯ ಸರಕಾರ ಆದೇಶ ...
Vijaya Karnataka 1 Jun 2019, 5:00 am
ಬೆಂಗಳೂರು: ರಾಜ್ಯದಲ್ಲಿ ಸಕಾಲದಲ್ಲಿ ಮಳೆಗಾಗಿ ಮುಜರಾಯಿ ದೇವಾಲಯಗಳಲ್ಲಿ ಜೂನ್ 6 ರಂದು ಪರ್ಜನ್ಯ ಜಪ ಹಾಗೂ ವಿಶೇಷ ಪೂಜೆಗಳನ್ನು ನಡೆಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಮಳೆ ವಿಳಂಬದಿಂದಾಗಿ ಬರ ಪರಿಸ್ಥಿತಿ ಮುಂದುವರಿದಿರುವ ಕಾರಣ ವರುಣ ದೇವನ ಪ್ರಾರ್ಥನೆಗಾಗಿ ಇಲಾಖಾ ವ್ಯಾಪ್ತಿಗೆ ಒಳಪಡುವ ಆರ್ಥಿಕವಾಗಿ ಸದೃಢವಾಗಿರುವ ದೇವಾಲಯಗಳಲ್ಲಿ ಜೂನ್ 6 ರಂದು ಗುರುವಾರ ಅಭಿಷೇಕ, ಪರ್ಜನ್ಯ ಜಪ, ಹೋಮದೊಂದಿಗೆ ಬ್ರಾಹ್ಮೀ ಮುಹೂರ್ತದಿಂದ ಪ್ರಾರಂಭಿಸಿ ವಿಶೇಷ ಪೂಜೆಗಳನ್ನು ನಡೆಸಬೇಕೆಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶಿಸಿದೆ. ಈ ವಿಶೇಷ ಪೂಜೆಗೆ ತಗಲುವ ವೆಚ್ಚವನ್ನು ಗರಿಷ್ಠ 10 ಸಾವಿರ ರೂ.ಗಳು ಮೀರದಂತೆ ಆಯಾ ದೇವಾಲಯಗಳ ನಿಧಿಯಿಂದ ಭರಿಸಲು ಆದೇಶದಲ್ಲಿ ಅನುಮತಿ ನೀಡಲಾಗಿದೆ.
ರಾಜ್ಯದಲ್ಲಿ ಮಳೆ ವಿಳಂಬದಿಂದಾಗಿ ಬರ ಪರಿಸ್ಥಿತಿ ಮುಂದುವರಿದಿರುವ ಕಾರಣ ವರುಣ ದೇವನ ಪ್ರಾರ್ಥನೆಗಾಗಿ ಇಲಾಖಾ ವ್ಯಾಪ್ತಿಗೆ ಒಳಪಡುವ ಆರ್ಥಿಕವಾಗಿ ಸದೃಢವಾಗಿರುವ ದೇವಾಲಯಗಳಲ್ಲಿ ಜೂನ್ 6 ರಂದು ಗುರುವಾರ ಅಭಿಷೇಕ, ಪರ್ಜನ್ಯ ಜಪ, ಹೋಮದೊಂದಿಗೆ ಬ್ರಾಹ್ಮೀ ಮುಹೂರ್ತದಿಂದ ಪ್ರಾರಂಭಿಸಿ ವಿಶೇಷ ಪೂಜೆಗಳನ್ನು ನಡೆಸಬೇಕೆಂದು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶಿಸಿದೆ. ಈ ವಿಶೇಷ ಪೂಜೆಗೆ ತಗಲುವ ವೆಚ್ಚವನ್ನು ಗರಿಷ್ಠ 10 ಸಾವಿರ ರೂ.ಗಳು ಮೀರದಂತೆ ಆಯಾ ದೇವಾಲಯಗಳ ನಿಧಿಯಿಂದ ಭರಿಸಲು ಆದೇಶದಲ್ಲಿ ಅನುಮತಿ ನೀಡಲಾಗಿದೆ.