ಆ್ಯಪ್ನಗರ

ಭೂ ಸುಧಾರಣೆ ತಿದ್ದುಪಡಿ, ಲೋಕಾಯುಕ್ತ ಸೇರಿದಂತೆ ಸದನದಲ್ಲಿ ಹಲವು ವಿಧೇಯಕಗಳ ಮಂಡನೆ

ಕರ್ನಾಟಕ ಲೋಕಾಯುಕ್ತ ಮಸೂದೆ ಸೇರಿದಂತೆ ಹಲವು ಪ್ರಮುಖ ವಿಧೇಯಕಗಳನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ವಿಧಾನಮಂಡಕ ಅಧಿವೇಶನದ ಎರಡನೇ ದಿನವಾದ ಇಂದು ಸ್ಪೀಕರ್ ಸೂಚನೆಯಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಲವು ವಿಧೇಯಕಗಳನ್ನು ಮಂಡಿಸಿದರು.

Vijaya Karnataka Web 22 Sep 2020, 1:20 pm
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ಕೊರೊನಾ ಭೀತಿಯ ನಡುವೆಯೂ ಮುಂಜಾಗ್ರತಾ ಕ್ರಮಗಳೊಂದಿಗೆ ಅಧಿವೇಶನ ನಡೆಯುತ್ತಿದ್ದು, ಎರಡನೇ ದಿನವಾದ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಹಲವು ವಿಧೇಯಕಗಳನ್ನು ಮಂಡಿಸಿದ್ದಾರೆ. ಸದನ ಈ ಮಸೂದೆಗಳನ್ನು ಅಂಗೀಕರಿಸಿದೆ.
Vijaya Karnataka Web BSY010


ಕೊರೊನಾ ಉಪಕರಣಗಳ ಹಗರಣ ವಿಚಾರವಾಗಿ ಸದನದಲ್ಲಿ ಮತ್ತೆ ಲೆಕ್ಕ ಕೇಳಿದ ಸಿದ್ದರಾಮಯ್ಯ..!

ಸಿಎಂ ಬಿಎಸ್‌ ಯಡಿಯೂರಪ್ಪ ಮಂಡಿಸಿದ ಪ್ರಮುಖ ವಿಧೇಯಕಗಳು

  • ಕರ್ನಾಟಕ ಲೋಕಾಯುಕ್ತ ( ಎರಡನೇ ತಿದ್ದುಪಡಿ) ವಿಧೇಯಕ
  • ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ವಿಧೇಯಕ
  • ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ವಿಧೇಯಕ
  • ಕರ್ನಾಟಕ ಭಿಕ್ಷಾಟನೆ ನಿಷೇಧ ( ತಿದ್ದುಪಡಿ) ವಿಧೇಯಕ
  • ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ
  • ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಇತರ ಕಾನೂನು ( ತಿದ್ದುಪಡಿ) ವಿಧೇಯಕ
  • 2020 ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ( ತಿದ್ದುಪಡಿ) ವಿಧೇಯಕ
  • 2020 ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಸಂಬಳಗಳು ವಿಧೇಯಕ
  • 2020 ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ ( ಸೌಲಭ್ಯ) (ತಿದ್ದುಪಡಿ) ವಿಧೇಯಕ
  • 2020 ನೇ ಸಾಲಿನ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕ ಮಂಡನೆ
  • 2020 ನೇ ಸಾಲಿನ ಭೂ ಸುಧಾರಣಾ (ತಿದ್ದುಪಡಿ) ವಿಧೇಯಕ
  • ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ)ವಿಧೇಯಕ
  • ಕೈಗಾರಿಕಾ ಸೌಲಭ್ಯಗಳ (ತಿದ್ದುಪಡಿ) ವಿಧೇಯಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ