ಆ್ಯಪ್ನಗರ

ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ; ಸಮ್ಮಿಶ್ರ ಸರಕಾರಕ್ಕೆ ಆಘಾತ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶಾಸಕನಾಗಿ ಮುಂದುವರಿಯುತ್ತೇನೆ ಎಂದು ಎನ್ ಮಹೇಶ್ ಹೇಳಿಕೆ ನೀಡಿದ್ದಾರೆ.

Vijaya Karnataka Web 11 Oct 2018, 6:36 pm
ಬೆಂಗಳೂರು: ಸಮ್ಮಿಶ್ರ ಸರಕಾರದಲ್ಲಿ ಒಂದೆಡೆ ಸಂಪುಟ ವಿಸ್ತರಣೆ ಗೊಂದಲ ಮುಂದುವರಿದಿರುವ ಬೆನ್ನಲ್ಲೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್ ಮಹೇಶ್ ತಮ್ಮ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.
Vijaya Karnataka Web N MAHESH


ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಮಹೇಶ್, ರಾಜ್ಯದ ಸಿಎಂ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸರಕಾರಕ್ಕೆ ಬೆಂಬಲ ಮುಂದುವರಿಸುತ್ತೇನೆ.

ಆದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶಾಸಕನಾಗಿ ಮುಂದುವರಿಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಜೆಡಿಎಸ್‌ ಮತ್ತು ಬಿಎಸ್‌ಪಿ ಮಧ್ಯೆ ಚುನಾವಣಾ ಪೂರ್ವ ಮೈತ್ರಿಯಾಗಿತ್ತು. ಕುಮಾರಸ್ವಾಮಿ ನನಗೆ ದೊಡ್ಡ ಖಾತೆಯನ್ನೇ ಕೊಟ್ಟಿದ್ದರು.
ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಚಾಮರಾಜನಗರ ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್‌ ಮಹೇಶ್ ಹೇಳಿದ್ದಾರೆ.
ಕೆಲದಿನಗಳ ಹಿಂದಷ್ಟೇ ಬಿಎಸ್‌ಪಿ ಮತ್ತು ಕಾಂಗ್ರೆಸ್ ಮೈತ್ರಿ ಕುರಿತು ಉಭಯ ಪಕ್ಷದ ನಾಯಕರಲ್ಲಿ ಸಹಮತ ಮೂಡದ ಕಾರಣ, ಸಚಿವ ಮಹೇಶ್ ರಾಜೀನಾಮೆ ನೀಡುತ್ತಾರೆ ಎನ್ನಲಾಗಿತ್ತು. ಆದರೆ ರಾಜೀನಾಮೆ ಸುದ್ದಿ ವದಂತಿ ಎಂದು ಮಹೇಶ್ ಹೇಳಿದ್ದರು.

ಮಹೇಶ್ ಮುಂದೆ ಶಾಸಕನಾಗಿ ತಾನು ಕಾರ್ಯನಿರ್ವಹಿಸಲಿದ್ದೇನೆ, ಪಕ್ಷ ಸಂಘಟನೆ, ಲೋಕಸಭಾ ಚುನಾವಣೆ ಹಾಗು ಉಪಚುನಾವಣೆಯಲ್ಲಿ ಕೆಲಸ ಮಾಡಬೇಕಿದೆ. ಸಚಿವನಾಗಿದ್ದರೆ ಅದಕ್ಕೆ ತೊಡಕಾಗುತ್ತದೆ. ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ