ಆ್ಯಪ್ನಗರ

ವಾಹಿನಿಗಳ ಮೇಲ್ವಿಚಾರಣೆ ಸಮಿತಿ ರಚನೆ: ಕಾರ್ಯದರ್ಶಿಗೆ ನೋಟಿಸ್‌

ಖಾಸಗಿ ಸುದ್ದಿ ಮತ್ತು ಮನೋರಂಜನೆ ವಾಹಿನಿಯಲ್ಲಿನ ಕಾರ್ಯಕ್ರಮಗಳ ಮೇಲೆ ನಿಗಾ ಮತ್ತು ನಿಯಂತ್ರಣಕ್ಕೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ...

Vijaya Karnataka 26 Jun 2019, 5:00 am
ಬೆಂಗಳೂರು: ಖಾಸಗಿ ಸುದ್ದಿ ಮತ್ತು ಮನೋರಂಜನೆ ವಾಹಿನಿಯಲ್ಲಿನ ಕಾರ್ಯಕ್ರಮಗಳ ಮೇಲೆ ನಿಗಾ ಮತ್ತು ನಿಯಂತ್ರಣಕ್ಕೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿ ರಚನೆ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್‌ ನಿರ್ದೇಶಿಸಿದೆ.
Vijaya Karnataka Web dish


ಕಾರ್ಯಕ್ರಮಗಳ ನಿಯಂತ್ರಿಸುವ ನಿಟ್ಟಿನಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕು ಎಂದು 2018ರ ಫೆ.19ರಂದು ಕೇಂದ್ರ ಸರಕಾರವೂ ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್ಸ್‌ ರೆಗ್ಯೂಲೇಷನ್ಸ್‌ ಕಾಯಿದೆ-1995ರ ಅಡಿಯಲ್ಲಿ ದೇಶದ ಎಲ್ಲ ರಾಜ್ಯಗಳಿಗೆ ನಿರ್ದೇಶಿಸಿದೆ. ಆದರೆ, ರಾಜ್ಯದಲ್ಲಿ ಸಮಿತಿಯನ್ನು ರಚನೆ ಮಾಡಿಲ್ಲ ಎಂದು ಗೀತಾ ಮಿಶ್ರಾ ಎಂಬುವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಮತ್ತು ನ್ಯಾ.ಎಚ್‌.ಟಿ.ನರೇಂದ್ರ ಪ್ರಸಾದ್‌ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ