ಆ್ಯಪ್ನಗರ

ಕೊರೊನಾ ಭೀತಿ: ಖಾಸಗಿ ವೈದ್ಯರು ಕ್ಲಿನಿಕ್‌ಗಳನ್ನು ಮುಚ್ಚಿರುವುದು ಅಮಾನವೀಯ ನಡೆ ಎಂದ ಸಿದ್ದರಾಮಯ್ಯ

ಕೊರೊನಾ ಭೀತಿಯ ಕಾರಣಕ್ಕಾಗಿ ಖಾಸಗಿ ವೈದ್ಯರು ಹಾಗೂ ಆಸ್ಪತ್ರೆಗಳು ತಮ್ಮ ಕ್ಲಿನಿಕ್‌ಗಳನ್ನು ಮುಚ್ಚಿರುವುದು ಅಮಾನವೀಯವಾದ ನಡೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web 7 Apr 2020, 11:45 am
ಬೆಂಗಳೂರು: ಕೊರೊನಾ ಭೀತಿಯಿಂದ ಖಾಸಗಿ ವೈದ್ಯರು ಕ್ಲಿನಿಕ್‌ಗಳನ್ನು ಮುಚ್ಚಿರುವುದು ಅಮಾನವೀಯ ನಡೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Vijaya Karnataka Web siddaramayha


ಟ್ವಿಟ್ಟರ್‌ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಅವರು, “ಕೊರೊನಾ ಸೋಂಕಿನ ಭೀತಿಯಿಂದ ಹಲವಾರು ಖಾಸಗಿ ವೈದ್ಯರು ಕ್ಲಿನಿಕ್‌ಗಳನ್ನು ಮುಚ್ಚಿರುವ ವರದಿಗಳು ಬರುತ್ತಿವೆ. ಇದು ಅಮಾನವೀಯ ನಿರ್ಧಾರ.ಇದರಿಂದ ಬೇರೆ ಸಾಮಾನ್ಯ ಖಾಯಿಲೆಯುಳ್ಳವರು ಚಿಕಿತ್ಸೆ ಇಲ್ಲದೆ ಬವಣೆ ಪಡುತ್ತಿದ್ದಾರೆ ಸಿಎಂ ಬಿಎಸ್‌ವೈ .ತಕ್ಷಣ ಮಧ್ಯೆ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಗುಡ್‌ ಫ್ರೈಡೇ, ಈಸ್ಟರ್‌ ಸಂದರ್ಭ ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಪಾಲನೆ ಮಾಡಿ: ಭಾಸ್ಕರ್‌ ರಾವ್‌


ರಾಜ್ಯದಲ್ಲಿ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಕ್ಲೀನಿಕ್‌ಗಳನ್ನು ಮುಚ್ಚಲಾಗುತ್ತಿದೆ. ಖಾಸಗಿ ವೈದ್ಯರು ಕ್ಲಿನಿಕ್‌ಗಳನ್ನು ಮುಚ್ಚದಂತೆ ಸರ್ಕಾರ ಸೂಚನೆ ನೀಡಿದರೂ ವೈದ್ಯರು ಇದಕ್ಕೆ ಸ್ಪಂದಿಸುತ್ತಿಲ್ಲ.

ಪರಿಣಾಮ ಅನಾರೋಗ್ಯಗಳಿಗೆ ಒಳಗಾದವರು ಚಿಕಿತ್ಸೆ ಪಡೆದುಕೊಳ್ಳಲು ಹಾಗೂ ಔಷಧವನ್ನು ಪಡೆದುಕೊಳ್ಳಲು ವೈದ್ಯರ ಬಳಿ ಜನರು ಹೋಗಲು ಸಾಧ್ಯವಾಗುತ್ತಿಲ್ಲ. ಈ ಕುರಿತಾಗಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆಯನ್ನು ನೀಡಿದ್ದರು.

ಲಾಕ್‌ಡೌನ್‌: ಬೆಂಗ್ಳೂರಿಂದ ಸಿಂಧನೂರಿಗೆ ನಡೆದೂ ನಡೆದೂ ಕಣ್ಣುಮುಚ್ಚಿದ 29 ವರ್ಷದ ಗಂಗಮ್ಮ!

ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡಾ ವೈದ್ಯರ ಹಾಗೂ ಖಾಸಗಿ ಆಸ್ಪತ್ರೆಗಳ ಈ ನಡೆಯನ್ನು ಖಂಡಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರದ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ವೈದ್ಯರಿಗೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಕಠಿಣ ಸೂಚನೆಗಳನ್ನು ನೀಡಬೇಕಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ