ಆ್ಯಪ್ನಗರ

ಖ್ಯಾತ ಸಾಹಿತಿ ಪ್ರೊ ಎಲ್‌ಎಸ್‌ ಶೇಷಗಿರಿರಾವ್‌ ನಿಧನ

ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ನಿಘಂಟು ತಜ್ಞರಾಗಿ ವಿದ್ಯಾರ್ಥಿಗಳಿಗೆ ಜ್ಞಾನ ಜ್ಯೋತಿ ಬೆಳಗಿದ್ದ ಪ್ರೊ. ಎಲ್‌ಎಸ್‌. ಶೇಷಗಿರಿ ರಾವ್‌ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು.

Vijaya Karnataka Web 20 Dec 2019, 7:25 pm
ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ಚಿಂತಕರು, ನಿಘಂಟು ರಚಿಸಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಪ್ರೊ ಎಲ್‌ಎಸ್‌ ಶೇಷಗಿರಿ ರಾವ್‌ (95) ಶುಕ್ರವಾರ ಬೆಳಗ್ಗೆ ನಿಧನರಾದರು.
Vijaya Karnataka Web ಎಲ್‌ಎಸ್‌ ಶೇಷಗಿರಿ ರಾವ್‌
ಎಲ್‌ಎಸ್‌ ಶೇಷಗಿರಿ ರಾವ್‌


ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಶೇಷಗಿರಿ ರಾವ್‌ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರೊಎಲ್‌ಎಸ್‌ ಎಂದೇ ಸಾಹಿತ್ಯ ವಲಯದಲ್ಲಿ ಚಿರಪರಿಚಿತರಾಗಿದ್ದ ಶೇಷಗಿರಿರಾವ್ ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ.

ಕನ್ನಡ ಸಾರಸ್ವತ ಲೋಕದ ಮೇರು ಸಾಹಿತಿ ಎಲ್. ಎಸ್. ಶೇಷಗಿರಿ ರಾವ್‌!


ಇಂಗ್ಲಿಷ್‌ ಸಾಹಿತ್ಯ ಚರಿತ್ರೆ ಗ್ರಂಥಕ್ಕೆ ರಾವ್‌ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕೂಡ ಸಂದಿತ್ತು.

ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯಂಥ ಪ್ರತಿಷ್ಠಿತ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಪ್ರೊಎಲ್‌ಎಸ್‌ಗೆ ಸಂದಿತ್ತು.



ಪ್ರೊ ಎಲ್‌ಎಸ್‌ ಶೇಷಗಿರಿ ರಾವ್ ನಿಧನಕ್ಕೆ ರಾಜಕಾರಣಿಗಳು, ಸಾಹಿತಿಗಳು, ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ