ಆ್ಯಪ್ನಗರ

ಬಡ್ತಿ ಮೀಸಲು: ಸುಪ್ರೀಂನಲ್ಲಿ ಮಹತ್ವದ ವಿಚಾರಣೆ ಇಂದು

ಬಡ್ತಿ ಮೀಸಲು ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ಶುಕ್ರವಾರ ಮಹತ್ವದ ವಿಚಾರಣೆ ನಡೆಯಲಿದೆ.

Vijaya Karnataka 27 Jul 2018, 7:33 am
ಬೆಂಗಳೂರು: ಬಡ್ತಿ ಮೀಸಲು ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ಶುಕ್ರವಾರ ಮಹತ್ವದ ವಿಚಾರಣೆ ನಡೆಯಲಿದೆ.
Vijaya Karnataka Web Supreme Court


ಬಿ.ಕೆ. ಪವಿತ್ರಾ ಪ್ರಕರಣದಲ್ಲಿ ನೀಡಿದ ಆದೇಶದ ಜಾರಿ ಸಂಬಂಧ ಕೋರ್ಟ್‌ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಜತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಹಿತ ಕಾಯಲು ರಾಜ್ಯ ಸರಕಾರ ತಂದಿರುವ ಕಾಯಿದೆಯ ಭವಿಷ್ಯದ ಬಗ್ಗೆಯೂ ನಿರ್ಧಾರವಾಗುವ ಸಾಧ್ಯತೆಯಿದೆ. 2017ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಪ್ರಕಟಿಸಿದ ತೀರ್ಪಿನ ಅನುಸಾರ ರಾಜ್ಯ ಸರಕಾರ ಹೊಸ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿದೆ. ಇದರಿಂದ 3,758 ಪರಿಶಿಷ್ಟ ಅಧಿಕಾರಿಗಳು, ನೌಕರರಿಗೆ ಹಿಂಬಡ್ತಿಯಾಗಿದೆ. ರಾಜ್ಯದ ಕಾಯಿದೆಯನ್ನು ಸುಪ್ರೀಂ ಕೋರ್ಟ್‌ ಮಾನ್ಯ ಮಾಡಿದರೆ ಈ ನೌಕರರಿಗೆ ಪುನಃ ಮುಂಬಡ್ತಿ ದೊರಕಲಿದೆ. ಆದರೆ, ಸಂಖ್ಯಾಧಿಕ ಕೋಟಾದಡಿ (ಎಸ್‌ಎನ್‌ಕ್ಯೂ) ಈ ಪ್ರಕ್ರಿಯೆ ನಡೆಸಲು ಕಾಯಿದೆಯಲ್ಲಿ ಅವಕಾಶ ಮಾಡಿಕೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ