ಆ್ಯಪ್ನಗರ

ಶೀರೂರು ಸ್ವಾಮೀಜಿ ಸಾವಿನ ಬಗ್ಗೆ ಶಂಕೆ ಇದ್ದರೆ ಸೂಕ್ತ ತನಿಖೆ: ಗೃಹ ಸಚಿವ

ಅಷ್ಟಮಠಗಳಲ್ಲಿ ಒಂದಾಗಿರುವ ಶೀರೂರು ಮಠದ ಶ್ರೀಲಕ್ಷ್ಮೀವರತೀರ್ಥರ ಸಾವಿನ ಬಗ್ಗೆ ಯಾವುದೇ ಶಂಕೆ ಇದ್ದಲ್ಲಿ ಸೂಕ್ತ ತನಿಖೆ ನಡೆಸುತ್ತೇವೆ

Vijaya Karnataka Web 19 Jul 2018, 2:05 pm
ಬೆಂಗಳೂರು: ಅಷ್ಟಮಠಗಳಲ್ಲಿ ಒಂದಾಗಿರುವ ಶೀರೂರು ಮಠದ ಶ್ರೀಲಕ್ಷ್ಮೀವರತೀರ್ಥರ ಸಾವಿನ ಬಗ್ಗೆ ಯಾವುದೇ ಶಂಕೆ ಇದ್ದಲ್ಲಿ ಸೂಕ್ತ ತನಿಖೆ ನಡೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
Vijaya Karnataka Web G Parameshwar


ಶೀರೂರಿನಲ್ಲಿ ಮಂಗಳವಾರ ನಡೆದಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳ ಜತೆ ಊಟ ಮಾಡಿದ್ದ ಶ್ರೀಪಾದರಿಗೆ ಆಹಾರದಲ್ಲಿ ವ್ಯತ್ಯಯವಾಗಿ ವಾಂತಿಬೇಧಿ ಸಹಿತ ಉದರ ಸಂಬಂಧಿ ಸಮಸ್ಯೆ ತಲೆದೋರಿತ್ತು.

ವಿಷ ಪ್ರಾಶನ ಶಂಕೆ: ಪೊಲೀಸರಿಂದ ಶೀರೂರು ಶ್ರೀ ಸಾವಿನ ತನಿಖೆ

ಮಂಗಳವಾರ ರಾತ್ರಿ ಅನಾರೋಗ್ಯ ತೀವ್ರಗೊಂಡ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಗುರುವಾರ ಮುಂಜಾನೆ ಕೊನೆಯುಸಿರೆಳೆದಿದ್ದರು.

ಶ್ರೀಗಳ ದೇಹದಲ್ಲಿ ವಿಷಪ್ರಾಶನ ಆಗಿರುವ ಶಂಕೆಯಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ. ಶ್ರೀಗಳ ಪಾರ್ಥಿವ ಶರೀರವನ್ನು ಮಣಿಪಾಲ ಆಸ್ಪತ್ರೆಯಿಂದ ಶವಗಾರಕ್ಕೆ ರವಾನಿಸಲಾಗಿದೆ.

ಶ್ರೀಗಳ ಸಾವಿಗೆ ಮಾಜಿ ಸಚಿವ ಪ್ರಮೋದ್ ಮಾಧ್ವರಾಜ್ ವಿಷಾದ

ಶೀರೂರು ಶ್ರೀಗಳ ಅನಿರೀಕ್ಷಿತ ಸಾವು ಬಹಳ ನೋವು ತಂದಿದೆ ಮಾಜಿ ಸಚಿವ ಪ್ರಮೋದ್ ಮಾಧ್ವರಾಜ್ ವಿಷಾದ ವ್ಯಕ್ತಪಡಿಸಿದ್ದಾರೆ. ಶ್ರೀಗಳ ಸಾವಿನ ಬಗ್ಗೆ ಅನೇಕ ಅನುಮಾನಗಳಿದ್ದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ