ಆ್ಯಪ್ನಗರ

ಮಡಿಕೇರಿಯಲ್ಲಿ ಸಿದ್ದರಾಮಯ್ಯಗೆ ಘೇರಾವ್‌ ಯತ್ನ

ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ

Vijaya Karnataka Web 9 Jan 2018, 6:01 pm
ಮಡಿಕೇರಿ: ಕೊಡುಗೆ ಜಿಲ್ಲೆಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
Vijaya Karnataka Web protest against cm siddaramaiah
ಮಡಿಕೇರಿಯಲ್ಲಿ ಸಿದ್ದರಾಮಯ್ಯಗೆ ಘೇರಾವ್‌ ಯತ್ನ


ಮಡಿಕೇರಿಗೆ ಆಗಮಿಸಿದ ಸಿದ್ದರಾಮಯ್ಯ ಸುದರ್ಶನ ಅತಿಥಿ ಗೃಹದಿಂದ ಹೊರಬರುತ್ತಿದ್ದಾಗ ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಪ್ರತಿಮೆ ಎದುರು ಕುರಿತು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾದರು

ಕಪ್ಪು ಬಟ್ಟೆ ಬಾಯಿಗೆ ಕಟ್ಟಿಕೊಂಡು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದರು.

ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ಮೂಡಿತ್ತು. ಕೂಡಲೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಸಿದ್ದರಾಮಯ್ಯ ಹಾಗೂ ಅವರ ಬೆಂಗಾವಲು ಪಡೆ ವಾಹನ ಸುರಕ್ಷಿತವಾಗಿ ತೆರಳಲು ಅನುವು ಮಾಡಿಕೊಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ