ಆ್ಯಪ್ನಗರ

ಹರಿದು ಬಂದ ಡಿಕೆಶಿ ಅಭಿಮಾನಿಗಳು, ಬಂಧನ ಖಂಡಿಸಿ ಬೆಂಗಳೂರಿನಾದ್ಯಂತ ಪ್ರತಿಭಟನೆ

ರಾಜ್ಯದ ಹಲವು ಭಾಗಗಳಿಂದ ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್‌ ಅಭಿಮಾನಿಗಳು ನಗರಕ್ಕೆ ಬಂದಿದ್ದು, ಅವರೆಲ್ಲಾ ಡಿ.ಕೆ ಶಿವಕುಮಾರ್‌ ಭಾವಚಿತ್ರ, ಮುಖವಾಡ ಹಾಕಿಕೊಂಡು ಬಂಧನ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Vijaya Karnataka Web 11 Sep 2019, 12:09 pm
ಬೆಂಗಳೂರು: ಜಾರಿ ನಿರ್ದೇಶನಾಲಯ ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಬಂಧಿಸಿರುವುದನ್ನು ಖಂಡಿಸಿ ಒಕ್ಕಲಿಗರ ಸಂಘ ಸಂಸ್ಥೆಗಳು ಕರೆ ನೀಡಿರುವ ಬುಧವಾರದ ಪ್ರತಿಭಟನೆಗೆ ಜನಸಾಗರವೇ ಹರಿದು ಬಂದಿದೆ.
Vijaya Karnataka Web DK Shivakumar Protest


ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಿಂದ ಪ್ರೀಡಂ ಪಾರ್ಕ್‌ವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದೆ. ರಾಜ್ಯದ ಹಲವು ಭಾಗಗಳಿಂದ ಡಿ.ಕೆ. ಶಿವಕುಮಾರ್‌ ಅಭಿಮಾನಿಗಳು ನಗರಕ್ಕೆ ಬಂದಿದ್ದು, ಅವರೆಲ್ಲಾ ಶಿವಕುಮಾರ್‌ ಭಾವಚಿತ್ರ, ಮುಖವಾಡ ಹಾಕಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.



ಶಾಂತಿಭಂಗಕ್ಕೆ ಅವಕಾಶ ನೀಡಬೇಡಿ: ಪ್ರತಿಭಟನೆಗೆ ಇಳಿದವರಿಗೆ ಡಿಕೆಶಿ ಮನವಿ

ಮುಖ್ಯವಾಗಿ ಅವರ ಸ್ವಕ್ಷೇತ್ರ ಕನಕಪುರ, ರಾಮನಗರದಿಂದ ಸುಮಾರು ಐದು ಸಾವಿರದಷ್ಟು ಜನರು ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ನಗರಕ್ಕೆ ಬಂದಿದ್ದು ರ‍್ಯಾಲಿಯಲ್ಲಿ ಭಾಗವಹಿಸಿದ್ದಾರೆ. ಪ್ರತಿಭಟನೆಯಲ್ಲಿ ಡಿ.ಕೆ. ಶಿವಕುಮಾರ್‌ ಭಿತ್ತಿಪತ್ರದ ಜೊತೆಗೆ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ ಫೊಟೋ ಕೂಡ ಗಮನ ಸೆಳೆಯುತ್ತಿದೆ.


ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡಿರುವ ಒಕ್ಕಲಿಗ ಸಮಯದಾಯದವರು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೃಷ್ಣಬೈರೇಗೌಡ, ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಚಲುವರಾಯಸ್ವಾಮಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.

ನ್ಯಾಷನಲ್‌ ಕಾಲೇಜು ಮೈದಾನ ಮಾತ್ರವಲ್ಲದೆ, ರಾಜಾಜಿನಗರ ಶ್ರೀರಾಮಮಂದಿರ, ಮೈಸೂರು ರಸ್ತೆ ಕಡೆಯಿಂದ ಪ್ರತಿಭಟನಾ ಮೆರವಣಿಗೆಗಳು ಆರಂಭಗೊಂಡಿವೆ. ಇವೆಲ್ಲಾ ಫ್ರೀಡಂ ಪಾರ್ಕ್‌ನಲ್ಲಿ ಸಮಾರೋಪಗೊಳ್ಳಲಿವೆ.

ಡಿಕೆಶಿ ಬಂಧನ ವಿರೋಧಿಸಿ ಸೆ.11ರ ಪ್ರತಿಭಟನೆಗೆ ಜೆಡಿಎಸ್ ಬೆಂಬಲ
ಪ್ರತಿಭಟನೆಯಿಂದಾಗಿ ನಗರದ ಹಲವು ಭಾಗಗಳಲ್ಲಿ ಬದಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಎಲ್ಲೆಲ್ಲೂ ರಸ್ತೆಗಳಲ್ಲಿ ವಾಹನ ದಟ್ಟಣೆ ಬೆಳಗ್ಗೆಯಿಂದ ಕಂಡು ಬರುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ