ಆ್ಯಪ್ನಗರ

PSI Scam | ಪಿಎಸ್ಐ ಪರೀಕ್ಷೆ ಅಕ್ರಮ: ಸದನದಲ್ಲಿ ಕೋಲಾಹಲ, ಬಾವಿಗಳಿದು ಕಾಂಗ್ರೆಸ್ ಪ್ರತಿಭಟನೆ

PSI Exam Scam: ಪಿಎಸ್ಐ ಪರೀಕ್ಷೆ ಹಗರಣದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮಾತನಾಡಿದ ಬಳಿಕ ಕಾಂಗ್ರೆಸ್ (Congress) ‌ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಮಾತನಾಡಿ, ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ಕಲಬುರಗಿಯ ಜ್ಞಾನಜ್ಯೋತಿ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಮಾತ್ರ ಸೀಮಿತ ಆಗಿ ನಡಿಯುತ್ತಿದೆ. ವಿಧಾನಸೌಧ ವ್ಯಾಪಾರ ಸೌಧ ಆಗಿದೆ. ಈ ತನಿಖೆಯ ವ್ಯಾಪ್ತಿ ವಿಸ್ತರಿಸಿ ಎಂದು ಒತ್ತಾಯಿಸಿದರು. ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಮತ್ತಷ್ಟು ಮಾತನಾಡಲು ಅವಕಾಶ ಕೋರಿದರು.

Edited byಹೇಮಂತ್ ಕುಮಾರ್ ಎಸ್ | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 20 Sep 2022, 8:36 pm

ಹೈಲೈಟ್ಸ್‌:

  • ಮಾತನಾಡಲು ಅವಕಾಶ ಕೊಟ್ಟಿಲ್ಲ ಎಂದು‌ ಆರೋಪಿಸಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ
  • ಜ್ಞಾನಜ್ಯೋತಿ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಮಾತ್ರ ಸೀಮಿತ ಆಗಿ ತನಿಖೆಯಾಗುತ್ತಿದೆ: ಪ್ರಿಯಾಂಕ್ ಖರ್ಗೆ
  • ಸದನದ ಬಾವಿಯಲ್ಲಿ 40% ಸರಕಾರ ಎಂದು ಬಿತ್ತಿಪತ್ರ ಪ್ರದರ್ಶನ
  • ಕ್ರಿಯಾಲೋಪ ಎತ್ತಿದ ಪಿ.ರಾಜೀವ್
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Congress protest in Karnataka legislative assembly
ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ- ಸಂಗ್ರಹ ಚಿತ್ರ
ಬೆಂಗಳೂರು: ಪಿಎಸ್‌ಐ ಪರೀಕ್ಷೆ ಅಕ್ರಮಕ್ಕೆ (PSI Exam Scam) ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ ಎಂದು‌ ಆರೋಪಿಸಿ ಕಾಂಗ್ರೆಸ್ (Congress) ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಹಗರಣದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿದ ಬಳಿಕ ಕಾಂಗ್ರೆಸ್ ‌ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ಕಲಬುರಗಿಯ ಜ್ಞಾನಜ್ಯೋತಿ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಮಾತ್ರ ಸೀಮಿತ ಆಗಿ ನಡಿಯುತ್ತಿದೆ. ವಿಧಾನಸೌಧ ವ್ಯಾಪಾರ ಸೌಧ ಆಗಿದೆ. ಈ ತನಿಖೆಯ ವ್ಯಾಪ್ತಿ ವಿಸ್ತರಿಸಿ ಎಂದು ಒತ್ತಾಯಿಸಿದರು. ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಮತ್ತಷ್ಟು ಮಾತನಾಡಲು ಅವಕಾಶ ಕೋರಿದರು.
PSI Scam | ಪಿಎಸ್ಐ ಪ್ರಕರಣದ ಆರೋಪಿ ಆರ್.ಡಿ.ಪಾಟೀಲ್ ಕಾಂಗ್ರೆಸ್ ಕಾರ್ಯಕರ್ತ: ಸಿಐಡಿಗೆ‌‌ ನೀಡಿದ ಹೇಳಿಕೆ ಉಲ್ಲೇಖಿಸಿ ಬಸವರಾಜ ಬೊಮ್ಮಾಯಿ ಆರೋಪ
ಆದರೆ ಇದಕ್ಕೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿ ಸದನದ ಭಾವಿಗಿಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಸದನದ ಬಾವಿಯಲ್ಲಿ 40% ಸರಕಾರ ಎಂದು ಬಿತ್ತಿಪತ್ರ ಪ್ರದರ್ಶನ ಮಾಡಿದರು ಹಾಗೂ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಬಿಜೆಪಿ‌ ಸದಸ್ಯರು ಕೂಡಾ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.

ಕ್ರಿಯಾಲೋಪ ಎತ್ತಿದ ಪಿ.ರಾಜೀವ್

ಪಿಎಸ್ಎಸ್ ಪರೀಕ್ಷೆ ಅಕ್ರಮದ ಬಗ್ಗೆ ನಿಯಮ 69 ಅಡಿಯಲ್ಲಿ ಪ್ರಿಯಾಂಕ್ ಖರ್ಗೆ ಮಾತಿನ ಸಂದರ್ಭದಲ್ಲಿ ಪಿ.ರಾಜೀವ್ ಕ್ರಿಯಾಲೋಪ ಎತ್ತಿದರು.

ಪ್ರಿಯಾಂಕ್ ಪ್ರೆಸ್‌ಮೀಟ್ ಸಂದರ್ಭದಲ್ಲಿ ಪಿಎಸ್‌ಐ ಅಕ್ರಮದ ಬಗ್ಗೆ ಕ್ರಿಮಿನಲ್ ಕೇಸ್ ರಿಜಿಸ್ಟ್ರಾರ್ ಆಗಿರಲಿಲ್ಲ. ಮೊದಲ ನೋಟಿಸ್ ಸಿಆರ್‌ಪಿಸಿ ಸೆಕ್ಷನ್ 91 ಅಡಿಯಲ್ಲಿ ಹಾಗೂ ಎರಡನೇ ನೋಟಿಸ್ ಸಿಆರ್‌ಪಿಸಿ 160 ಅಡಿಯಲ್ಲಿ ಕೊಡಲಾಗಿತ್ತು. 160 ಅಡಿಯಲ್ಲಿ ನೋಟಿಸ್ ಕೊಟ್ಟಾಗ ಗೊತ್ತಿರುವಂತಹ ಮಾಹಿತಿಯನ್ನು ಹಂಚಿಕೊಳ್ಳಬೇಕು. ಮಾಹಿತಿ ಯಾವ ಮೂಲದಿಂದ‌ ಬಂತು ಎಂದು ತನಿಖಾಧಿಕಾರಿಗೆ ತಿಳಿಸಬೇಕು. ಇಲ್ಲಾಂದ್ರೆ ಸಂವಿಧಾನ ವಿರೋಧಿ‌‌‌ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
Karnataka Assembly: ವಿಧಾನಸಭೆಯಲ್ಲಿ ಪಿಎಸ್‌ಐ ಪರೀಕ್ಷೆ ಹಗರಣ ಕೋಲಾಹಲ: ಸದನಕ್ಕೆ ದವಸ ಧಾನ್ಯ ತಂದ ಕಾಂಗ್ರೆಸ್!
ಪಾರದರ್ಶಕವಾಗಿ ತ‌ನಿಖೆ: ಆರಗ ಜ್ಞಾನೇಂದ್ರ

ಪಿಎಸ್‌ಐ ಪರೀಕ್ಷೆ ಹಗರಣದ ಬಗ್ಗೆ ನಡೆದ ಚರ್ಚೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಉತ್ತರ ನೀಡಿ, ಪಿಎಸ್ಐ ಕೇಸ್‌ನಲ್ಲಿ ಪಾರದರ್ಶಕ ತನಿಖೆ ನಡೀತಿದೆ. ಸರ್ಕಾರ ಸಿಐಡಿ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದೆ. ಅಕ್ರಮದ ತನಿಖೆ ಸರಿಯಾಗಿ ನಡೆಯುತ್ತಿದೆ ಎಂದು ಹೇಳಿದ ಮಾಜಿ ಸಿಎಂ ಎಚ್ ಡಿ
ಕುಮಾರಸ್ವಾಮಿ ಅವರನ್ನು ಅಭಿನಂದಿಸ್ತೇನೆ ಎಂದರು.

ಕಾಂಗ್ರೆಸ್ ಕಾಲದಲ್ಲಿ ಹಲವು ಹಗರಣ ಆಗಿದೆ.‌ 2016-17 ರಲ್ಲಿ ಕಾಂಗ್ರೆಸ್ ಕಾಲದಲ್ಲೂ ಪಿಎಸ್ಐ ಹಗರಣ ನಡೆದಿತ್ತು. ಆದ್ರೆ ಕಾಂಗ್ರೆಸ್ ನವರು ಎಡಿಜಿಪಿ ಬಂಧಿಸಿರಲಿಲ್ಲ.ನಮ್ಮ ಸರ್ಕಾರ ಆರೋಪ ಬಂದ ಕೂಡಲೇ ಎಡಿಜಿಪಿ ಬಂಧಿಸಿದ್ದೇವೆ. ಪ್ರಾಮಾಣಿಕ ತನಿಖೆ ಮುಂದುವರಿಸುತ್ತೇವೆ ಎಂದರು.
Siddaramaiah | ಸರಕಾರ ಬುಟ್ಟಿಯಲ್ಲಿ ಹಾವಿಲ್ಲ, ಸುಮ್ಮನೆ 'ಬುಸ್‌.. ಬುಸ್‌..' ನಾಟಕ: ಎಲ್ಲ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಸಿದ್ದರಾಮಯ್ಯ ಆಗ್ರಹ
ಇದೇ ಸಂದರ್ಭದಲ್ಲಿ ಸಚಿವ ಡಾ. ಕೆ ಸುಧಾಕರ್ ಮಾತನಾಡಿ, ಕಾಂಗ್ರೆಸ್ ಹೋರಾಟದಲ್ಲಿ ಸತ್ಯ ನ್ಯಾಯ ಇಲ್ಲ. ಗೃಹ ಸಚಿವರ ಉತ್ತರ ಕೇಳುವ ಸೌಜನ್ಯವನ್ನು‌ ಕಾಂಗ್ರೆಸ್ ತೋರಿಸಿಲ್ಲ ಎಂದು ಆರೋಪಿಸಿದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ