ಆ್ಯಪ್ನಗರ

PSI Recruitment Scam: ಸಂಚಲನ ಸೃಷ್ಟಿಸಿದ ಪಿಎಸ್‌ಐ ಹಗರಣದ ಸುತ್ತ ಒಂದು ಸುತ್ತು!

PSI Recruitment Scam - ಕರ್ನಾಟಕ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ವಿಚಾರಣೆ ಒಂದು ಹಂತಕ್ಕೆ ಬಂದು ನಿಂತಂತಾಗಿದೆ. ಈ ಹಿಂದೆ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್‌ ಪೌಲ್‌ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕಲಬುರಗಿಯ ಶಾಲೆಯೊಂದರಿಂದ ಶುರುವಾದ ನೇಮಕಾತಿ ಹಗರಣ ಈಗ ಕರ್ನಾಟಕ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಯನ್ನು ಕಂಬಿ ಹಿಂದೆ ನಿಲ್ಲಿಸಿದೆ. ಪ್ರಕರಣ ಬೆಳಕಿಗೆ ಬಂದಿದ್ದು ಯಾವಾಗ? ಸಿಐಡಿ ಅಧಿಕಾರಿಗಳಿಗೆ ಯಾವಾಗ ಪ್ರಕರಣ ಕೈ ಸೇರಿತು. ಮತ್ತು ಈಗ ಈ ಕೇಸ್‌ ಯಾವ ಸ್ಥಿತಿಯಲ್ಲಿದೆ ಎಂಬುದರ ಸಂಪೂರ್ಣ ಘಟನಾವಳಿ, ವಿವರ ಇಲ್ಲಿದೆ.

Authored byಅವಿನಾಶ ವಗರನಾಳ | Vijaya Karnataka Web 10 Nov 2023, 3:25 pm

ಹೈಲೈಟ್ಸ್‌:


  • ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿರುವ PSI Recruitment Scam
  • 545 ಪಿಎಸ್‌ಐಗಳ ನೇಮಕಾತಿಯಲ್ಲಿ ನಡೆದಿದ್ದ ಪಿಎಸ್‌ಐ ನೇಮಕಾತಿ ಹಗರಣ
  • ಸಿಐಡಿಯಿಂದ ವಿಚಾರಣೆ, ನೇಮಕಾತಿ ವಿಭಾಗದ ಹಲವು ಅಧಿಕಾರಿಗಳ ಬಂಧನ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web PSI Scam
ಬೆಂಗಳೂರು: PSI Recruitment Scam ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕರ್ನಾಟಕದಲ್ಲಿ ತಲ್ಲಣವನ್ನೇ ಸೃಷ್ಟಿಸಿದೆ. ಸಣ್ಣದಾಗಿ ಶುರುವಾದ ಪ್ರಕರಣ ಇಡೀ ಸರ್ಕಾರವನ್ನೇ ಅಲುಗಾಡಿಸುವ ಮಟ್ಟಕ್ಕೆ ಬೆಳೆದಿತ್ತು. ಈಗ ಈ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ದೊಡ್ಡ ಬೇಟೆಯಾಡಿದ್ದು, ಈ ಹಿಂದೆ ಪೊಲೀಸ್‌ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್‌ ಪೌಲ್‌ ಅವರನ್ನು ಬಂಧಿಸಿದ್ದಾರೆ.
ಮೇ 26 ಮತ್ತು 27ರಂದು ಅಮೃತ್‌ ಪೌಲ್‌ರನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಎಲ್ಲದಕ್ಕೂ ಅಸ್ಪಷ್ಟ ಉತ್ತರ ನೀಡಿದ್ದ ಅಮೃತ್‌ ಪೌಲ್‌ರನ್ನು 40 ದಿನಗಳ ಬಳಿಕ ಬಂಧಿಸಲಾಗಿದೆ. 545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಡಿವೈಎಸ್‌ಪಿ ಸೇರಿ ಹಲವರನ್ನು ಬಂಧಿಸಿದ್ದ ಪೊಲೀಸರು ಈಗ ವಿಭಾಗದ ನೇತೃತ್ವ ವಹಿಸಿದ್ದ ಅಮೃತ್‌ ಪೌಲ್‌ರನ್ನು ಬಂಧಿಸಿದ್ದಾರೆ. ಕಲಬುರಗಿಯಲ್ಲಿ ಶುರುವಾದ ಅಕ್ರಮದ ವಾಸನೆ ಈಗ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಯನ್ನೇ ಕಂಬಿಯ ಹಿಂದಕ್ಕೆ ತಳ್ಳಿದೆ.

ಹಾಗಾದ್ರೆ ಕರ್ನಾಟಕದ ರಾಜಕಾರಣದಲ್ಲಿಯೂ ಸಂಚಲನ ಸೃಷ್ಟಿಸಿದ್ದ ಪ್ರಕರಣ ಬೆಳಕಿಗೆ ಬಂದಿದ್ದು ಯಾವಾಗ..? ಎಲ್ಲಿಂದ ಶುರುವಾಯಿತು. ಸದ್ಯದ ಅಪ್‌ಡೇಟ್‌ ಏನು ಎಂಬುದರ ಸಂಪೂರ್ಣ ಘಟನಾವಳಿ ಇಲ್ಲಿದೆ ನೋಡಿ.

PSI Recruitment Scam: ಪಿಎಸ್‌ಐ ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪೌಲ್ ಬಂಧನ
ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಘಟನಾವಳಿ
  • 2023, ನವೆಂಬರ್ 10- ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಬೇಕೆಂದು (ಮರುಪರೀಕ್ಷೆ) ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
  • 2023, ನವೆಂಬರ್ 10- ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ಬಿಜೆಪಿ ಸರಕಾರ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಬೇಕೆಂದು ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ಹೈಕೋರ್ಟ್ ವಜಾ
  • 2022, ಜುಲೈ 4 - ಸಿಐಡಿ ಅಧಿಕಾರಿಗಳಿಂದ ಪೊಲೀಸ್‌ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್‌ ಪೌಲ್‌ ಬಂಧನ.
  • 2022, ಜೂನ್‌ 1 - ಸಿಐಡಿ ಅಧಿಕಾರಿಗಳಿಂದ ಆರ್‌ಡಿ ಪಾಟೀಲ್‌ ಅಳಿಯ ಪ್ರಕಾಶ್‌ ಸೇರಿ ಮೂವರ ಬಂಧನ
  • 2022, ಮೇ 26 & 27 - ಸಿಐಡಿ ಅಧಿಕಾರಿಗಳಿಂದ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‌ ಪೌಲ್‌ ವಿಚಾರಣೆ
  • 2022, ಮೇ 12 - ನೇಮಕಾತಿ ವಿಭಾಗದಲ್ಲಿ ಡಿವೈಎಸ್‌ಪಿ ಆಗಿದ್ದ ಶಾಂತಕುಮಾರ್‌ ಬಂಧನ
  • 2022, ಮೇ 10 - ನೇಮಕಾತಿ ವಿಭಾಗದಲ್ಲಿ ನಾಲ್ವರು ಅಧಿಕಾರಿಗಳು ಸೇರಿ 6 ಮಂದಿ ಬಂಧನ
  • 2022, ಮೇ 1 - 400ಕ್ಕೂ ಹೆಚ್ಚು ಅಭ್ಯರ್ಥಿಗಳ ವಿಚಾರಣೆ ನಡೆಸಿದ ಸಿಐಡಿ
  • 2022, ಏಪ್ರಿಲ್‌ 30 - ಮರು ಪರೀಕ್ಷೆ ನಿರ್ಧಾರ ಹಿಂಪಡೆಯಲು ಆಗ್ರಹಿಸಿ ಬೆಂಗಳೂರಿನಲ್ಲಿ 400ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಪ್ರತಿಭಟನೆ
  • 2022, ಏಪ್ರಿಲ್‌ 29 - ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ನಿರ್ಧರಿಸಿದ ಸರ್ಕಾರ
  • 2022, ಏಪ್ರಿಲ್‌ 27 - ಪೊಲೀಸ್‌ ನೇಮಕಾತಿ ವಿಭಾಗದ ಎಜಿಡಿಪಿ ಅಮೃತ್‌ ಪೌಲ್‌ ವರ್ಗಾವಣೆ
  • 2022, ಏಪ್ರಿಲ್‌ 22 – ಅಫಜಲಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಾಂತೇಶ್‌ ಪಾಟೀಲ್‌ ಬಂಧನ.
  • 2022, ಏಪ್ರಿಲ್‌ 21 – ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿ ಐವರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧನ.
  • 2022, ಏಪ್ರಿಲ್‌ 9 - ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ವೀರೇಶ್ ನನ್ನು ಮೊದಲು ಬಂಧಿಸಲಾಯಿತು
  • 2022, ಏಪ್ರಿಲ್‌ 9 - ಆರೋಪಿಗಳ ವಿರುದ್ಧ ಕಲಬುರ್ಗಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲು
  • 2022, ಏಪ್ರಿಲ್‌ 8 - ಕಲಬುರ್ಗಿ ನಗರ ಪೊಲೀಸ್‌ ಠಾಣೆಗೆ ಬೆಂಗಳೂರು ಸಿಐಡಿ, ಎಫ್‌ಐಯು ಇನ್‌ಸ್ಪೆಕ್ಟರ್ ಕೆ.ಎಚ್ ದಿಲೀಪ್‌ ಕುಮಾರ್‌ ದೂರು
  • 2022, ಏಪ್ರಿಲ್‌ 7 - ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಅಕ್ರಮದ ತನಿಖೆ ಸಿಐಡಿಗೆ
  • 2022, ಫೆಬ್ರವರಿ 7 - ತಾತ್ಕಾಲಿಕ ಆಯ್ಕೆ ಪಟ್ಟಿ ತಡೆಗೆ ನೇಮಕಾತಿ ವಿಭಾಗದ ಎಡಿಐಜಿ ಸೂಚನೆ
  • 2022, ಜನವರಿ 18 - 545 ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
  • 2022, ಜನವರಿ 1 - ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಭೇಟಿಯಾಗಿ ಅಕ್ರಮದ ಬಗ್ಗೆ ಅಭ್ಯರ್ಥಿಗಳಿಂದ ದೂರು
  • 2021, ಅಕ್ಟೋಬರ್‌ 3 – ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿಯ ಲಿಖಿತ ಪರೀಕ್ಷೆ
  • 2021, ಜನವರಿ 21 - ಕರ್ನಾಟಕ ಪೊಲೀಸ್‌ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ