ಆ್ಯಪ್ನಗರ

ಸಂಭಾವನೆ ಬಿಡುಗಡೆಗೆ ಒತ್ತಾಯಿಸಿ ಇಂದು ಪಿಯು ಉಪನ್ಯಾಸಕರ ಪ್ರತಿಭಟನೆ

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದ ಸಂಭಾವನೆ ಬಿಡುಗಡೆ ಮಾಡಬೇಕೆಂಬುದೂ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಿಯು ಉಪನ್ಯಾಸಕರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

Vijaya Karnataka 25 Jun 2019, 5:00 am
ಬೆಂಗಳೂರು : ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದ ಸಂಭಾವನೆ ಬಿಡುಗಡೆ ಮಾಡಬೇಕೆಂಬುದೂ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಿಯು ಉಪನ್ಯಾಸಕರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
Vijaya Karnataka Web pu lecturers protest today
ಸಂಭಾವನೆ ಬಿಡುಗಡೆಗೆ ಒತ್ತಾಯಿಸಿ ಇಂದು ಪಿಯು ಉಪನ್ಯಾಸಕರ ಪ್ರತಿಭಟನೆ


ಅಲ್ಲದೆ, ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಅಥವಾ ಬಹಿಷ್ಕರಿಸುವ ನಿರ್ಧಾರವನ್ನು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಉಪನ್ಯಾಸಕರ ವಿವೇಚನೆಗೆ ಬಿಟ್ಟಿದೆ. ಈ ನಡುವೆ, ಮೌಲ್ಯಮಾಪನದಲ್ಲಿ ಭಾಗವಹಿಸದಿದ್ದಲ್ಲಿ ನಿಯಮಾನುಸಾರ ಕ್ರಮ ವಹಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಸಿದೆ.

''ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದರೂ ಪಿಯು ಇಲಾಖೆ 2018-19ನೇ ಸಾಲಿನ ಮೌಲ್ಯಮಾಪನ ಸಂಭಾವನೆ ಬಿಡುಗಡೆ ಮಾಡಿಲ್ಲ. ಉಪನ್ಯಾಸಕರು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ, ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೂನ್‌ 25ರಂದು ಬೆಳಗ್ಗೆ 10.30ಕ್ಕೆ ನಗರದ ಮೌರ್ಯ ವೃತ್ತದಲ್ಲಿರುವ ಗಾಂಧಿಧಿ ಪ್ರತಿಮೆ ಬಳಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ,'' ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಯು ಪೂರಕ ಪರೀಕ್ಷೆಗಳ ಮೌಲ್ಯಮಾಪನ ಮಂಗಳವಾರದಿಂದಲೇ ಆರಂಭವಾಗುತ್ತವೆ. ಹೀಗಾಗಿ ಪ್ರತಿಭಟನೆಯಲ್ಲಿ ಭಾಗವಹಿಸುವುದು, ಬಿಡುವುದು ಆಯಾ ಉಪನ್ಯಾಸಕರ ವಿವೇಚನೆಗೆ ಬಿಟ್ಟದ್ದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಹಿಂದಿನ ರೀತಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಮೌಲ್ಯಮಾಪನ ಸಂಭಾವನೆಯನ್ನು ಚೆಕ್‌ ಮೂಲಕ ವಿತರಿಸಬೇಕು. 2008 ಆ.1ರ ನಂತರ ನೇಮಕಾತಿ ಹೊಂದಿದ ಉಪನ್ಯಾಸಕರಿಗೂ ಎಕ್ಸ್‌ಗ್ರೇಷಿಯಾವನ್ನು ಮೂಲ ವೇತನದಲ್ಲಿ ವಿಲೀನಗೊಳಿಸಬೇಕು. ಪ್ರೌಢಶಾಲೆಯ ಪದೋನ್ನತಿ ಹೊಂದಿರುವ ಉಪನ್ಯಾಸಕರಿಗೆ 10, 15, 20 ವರ್ಷಗಳ ವೇತನ ಬಡ್ತಿ ನೀಡಬೇಕು. ಈ ಸಾಲಿನ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು ಎಂಬುದೂ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮೂಲಕ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ